ಶ್ರೀ ದ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ
ವಿಜಯ ದರ್ಪಣ ನ್ಯೂಸ್…. ಶ್ರೀ ದ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಜಯಪುರ ಡಿಸೆಂಬರ್ 30 : ಪಟ್ಟಣದ ಪುರಾತನ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಬ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವಿಷ್ಣುವಿನ ಸ್ಮರಣೆಯೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿದವು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪುರಸಭಾ ಸದಸ್ಯ ವಿ ನಂದಕುಮಾರ್, ವೈಕುಂಠ ಏಕಾದಶಿಯು ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಪರಮ ಪವಿತ್ರ ದಿನ. ಈ ದಿನ ಉಪವಾಸವಿದ್ದು ಭಕ್ತಿಯಿಂದ ಪೂಜೆ ಸಲ್ಲಿಸುವುದರಿಂದ…
ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ ಶಿಡ್ಲಘಟ್ಟ : ವೈಕುಂಠ ಏಕಾದಶಿ ಪ್ರಯುಕ್ತ ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು. ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಗರದ ಕೆ.ಎಚ್.ಬಿ ಕಾಲೋನಿಯ ಶ್ರೀಕಲ್ಯಾಣ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಯನ್ನು ಉಯ್ಯಾಲೆಯಲ್ಲಿರಿಸಿದ್ದು, ಭಕ್ತರು…
ಕರ್ನಾಟಕದಲ್ಲಿ ಪರಭಾಷಿಕರಿಗೆ ಕನ್ನಡ ಕಲಿಸಬೇಕು :ಕಂಟನಕುಂಟೆ ಕೃಷ್ಣಮೂರ್ತಿ
ವಿಜಯ ದರ್ಪಣ ನ್ಯೂಸ್….. ಕರ್ನಾಟಕದಲ್ಲಿ ಪರಭಾಷಿಕರಿಗೆ ಕನ್ನಡ ಕಲಿಸಬೇಕು :ಕಂಟನಕುಂಟೆ ಕೃಷ್ಣಮೂರ್ತಿ ದೇವನಹಳ್ಳಿ, ಡಿ. 29 : ವ್ಯಾವಹಾರಿಕವಾಗಿ ನಾವು ಯಾವುದೇ ಭಾಷೆಯನ್ನು ಕಲಿತರೂ ಕನ್ನಡ ಭಾಷೆಯನ್ನು ಮಾತ್ರ ಮಾತನಾಡಬೇಕು, ಪರಭಾಷಿಕರಿಗೆ ಕನ್ನಡ ಕಲಿಸಬೇಕು’ ಎಂದು ಬೆಂ.ಗ್ರಾ. ಕನ್ನಡ ರಂಗಭೂಮಿ ಕಲಾವಿದರ ಸಂಘದ ಗೌರವ ಅಧ್ಯಕ್ಷ ಕಂಟನಕುಂಟೆ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ವೆಂಕಟಗಿರಿಕೋಟೆ ಪಂಚಾಯ್ತಿಯ ಮುದುಗುರ್ಕಿ ಗ್ರಾಮದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಮೋಹನ್ಬಾಬುರವರ ಗೃಹದಲ್ಲಿ ಆಯೋಜಿಸಿದ್ದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ…
ಮಾವು ಬೆಳೆ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮು: ಸಸ್ಯ ಸಂರಕ್ಷಣಾ ಕ್ರಮ
ವಿಜಯ ದರ್ಪಣ ನ್ಯೂಸ್…. ಮಾವು ಬೆಳೆ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮು: ಸಸ್ಯ ಸಂರಕ್ಷಣಾ ಕ್ರಮ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ ಜಿಲ್ಲೆ ಡಿ.29: ಪ್ರಸಕ್ತ ಸಾಲಿನ ಮಾವು ಬೆಳೆಯಲ್ಲಿ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮಿನಲ್ಲಿ ಮಾವು ಬೆಳೆಗಾರರು ಕೈಗೊಳ್ಳಬೇಕಾಗಿರುವ ಸಸ್ಯ ಸಂರಕ್ಷಣಾ ಕ್ರಮಗಳು, ಔಷಧಿ ಸಿಂಪರಣೆ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಮಾಹಿತಿ ನೀಡಿದೆ. ಈ ಕ್ರಮಗಳನ್ನು ರೈತರು ಅನುಸರಿಸುವ ಮೂಲಕ ಮಾವು ಬೆಳೆ ಸಂರಕ್ಷಣೆಗೆ ಸಹಕಾರಿ ಆಗಲಿದೆ….
ಕುವೆಂಪು……… ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……
ವಿಜಯ ದರ್ಪಣ ನ್ಯೂಸ್….. ಕುವೆಂಪು……… ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ…… ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ – ಮನುಜ ಮತ – ವಿಶ್ವಪಥ…….. ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಮುಗಿಲೆತ್ತರಕ್ಕೆ ಏರಿಸಿ ಅದರ ಗಡಿಯನ್ನು ವಿಸ್ತರಿಸಿ ಭಾಷೆಯ ಮಹತ್ವ ಸಾರಿದವರು. ಅಕ್ಷರಗಳಲ್ಲಿ ಕೇವಲ ಭಾವನೆಗಳನ್ನು ಮಾತ್ರ ತುಂಬದೆ ಒಂದು…
ಕನ್ನಡದ ಕಂಪನ್ನು ಜಗತ್ತಿಗೆ ಪಸರಿಸಿದ ಕವಿ ಕುವೆಂಪು: ಅಪರ ಜಿಲ್ಲಾಧಿಕಾರಿ
ವಿಜಯ ದರ್ಪಣ ನ್ಯೂಸ್…. ಕನ್ನಡದ ಕಂಪನ್ನು ಜಗತ್ತಿಗೆ ಪಸರಿಸಿದ ಕವಿ ಕುವೆಂಪು: ಅಪರ ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗ್ರಾ ಜಿಲ್ಲೆ ಡಿ.29 : ಸಾಹಿತಿ, ಸಮಾಜ ಸುಧಾರಕ, ದಾರ್ಶನಿಕ ಕವಿ ಕುವೆಂಪು ಅವರು ಕನ್ನಡದ ಕಂಪನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕ ಅವರ ಸಾಹಿತ್ಯ ನಮಗೆ ಸದಾ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ…
ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್
ವಿಜಯ ದರ್ಪಣ ನ್ಯೂಸ್….. ಆಸರೆ” ಪುಸ್ತಕ ಹಾಗೂ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಂಡವಪುರ ಡಿಸೆಂಬರ್ 27 ಡೋಲು ನಗಾರಿಗಳೊಂದಿಗೆ ಶಾಸಕರನ್ನು ಸ್ವಾಗತ ಕೋರಿದ ಪ್ರತಿಭಾ ಕಾರಂಜಿ ಮಕ್ಕಳು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲಿಕೆಗೆ ಉತ್ತೇಜನ್ನು ನೀಡುವ ಉದ್ದೇಶದಿಂದ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಆಸರೆ ಪುಸ್ತಕ ಆಸರೆಯಾಗಿದೆ ಎಂದು ಶಾಸಕ ದರ್ಶನ್ ದ್ರುವ…
ಅಭಿಮಾನಿಗಳ ಅತಿರೇಕ…. ಹುಚ್ಚುತನದ ಪರಮಾವಧಿ…..
ವಿಜಯ ದರ್ಪಣ ನ್ಯೂಸ್…. ಅಭಿಮಾನಿಗಳ ಅತಿರೇಕ…. ಹುಚ್ಚುತನದ ಪರಮಾವಧಿ….. ಯಾರ್ರೀ ಅದು ಡಚ್ಚ – ಕಿಚ್ಚ. ( ದರ್ಶನ್ – ಸುದೀಪ್ ) + ( ಡೆವಿಲ್ – ಮಾರ್ಕ್ )…….. ಅವರ ಅಭಿಮಾನಿಗಳ ಯುದ್ಧವಂತೆ….. ಸಾಮಾಜಿಕ ಜಾಲತಾಣಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಇದು ಬಹುದೊಡ್ಡ ಚರ್ಚೆಯಂತೆ….. ಯಾಕಪ್ಪಾ, ಏನಾಗಿದೆ ಸಮಸ್ಯೆ, ಪ್ರಾಕೃತಿಕ ವಿಕೋಪ ನಿಯಂತ್ರಿಸಲು ಈ ಜಗಳವೇ ? ಆರ್ಥಿಕ ಕುಸಿತ ತಡೆಯಲು ಈ ಕುತಂತ್ರಗಳೇ ? ರಾಜ್ಯ ದೇಶದ ಘನತೆ ಕಾಪಾಡಲು ಈ ಬೈದಾಟಗಳೇ…
ಎಲ್ಲಾ ಧರ್ಮ ಪ್ರೀತಿಸುವ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು : ಆಲೂರು ಹನುಮಂತರಾಯಪ್ಪ
ವಿಜಯ ದರ್ಪಣ ನ್ಯೂಸ್…. ಎಲ್ಲಾ ಧರ್ಮ ಪ್ರೀತಿಸುವ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು : ಆಲೂರು ಹನುಮಂತರಾಯಪ್ಪ ಹಿರಿಯೂರು: ನಮ್ಮ ಭಾರತದೇಶವು ಸರ್ವ ಧರ್ಮಗಳ ಸಮನ್ವಯತೆಯನ್ನು ಕಾಯ್ದುಕೊಂಡಿರುವ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಹಾಗೂ ಧರ್ಮೀ ಯರನ್ನು ಗೌರವಿಸುತ್ತದೆ, ಈ ನಿಟ್ಟಿನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಹೀಗೆ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಾಗೂ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕೆಂಬ ಉದ್ದೇಶ ದಿಂದ ನಮ್ಮ ಶಾಲೆಯಲ್ಲಿ ಇಂದು ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ವಾಣಿ ವಿಲಾಸ ವಿದ್ಯಾ…
ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ
ವಿಜಯ ದರ್ಪಣ ನ್ಯೂಸ್….. ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 25: ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಆಹಾರ ನಾಗರಿಕ ಸರಬರಾಜು,ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ,…
