ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು
ವಿಜಯ ದರ್ಪಣ ನ್ಯೂಸ್… ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು ,ರೈತರ ಪಂಪ್ಸೆಟ್ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಸರಬರಾಜು, ಗುಂಡುತೋಪುಗಳ ಒತ್ತುವರಿ ತೆರವುಗೊಳಿಸಿ ಗಿಡ ನೆಡುವುದರ ಜತೆಗೆ ರೈತರ ಸಮಸ್ಯೆಗಳನ್ನು ಪರಿಹರಿಸಲು ರೈತರ ಸಭೆ ಕರೆಯಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ತಿಳಿಸಿದರು. ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಸೇರಿ…
ಪೌರಕಾರ್ಮಿಕರು ಹಾಗೂ ತೃತಿಯ ಲಿಂಗಿಗಳಿಗೆ ಬಾಗಿನ ನೀಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ
ವಿಜಯ ದರ್ಪಣ ನ್ಯೂಸ್…. ನಾಡ ದೇವತೆ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಪೌರಕಾರ್ಮಿಕರು ಹಾಗೂ ತೃತಿಯ ಲಿಂಗಿಗಳಿಗೆ ಬಾಗಿನ ನೀಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಮೈಸೂರು ತಾಂಡವಪುರ ಜುಲೈ 17 : ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ವತಿಯಿಂದ ನಾಡ ದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಪೌರಕಾರ್ಮಿಕ ಮಹಿಳೆಯರಿಗೆ ಹಾಗೂ ತೃತೀಯಲಿಂಗಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರವರು ಸೀರೆ, ಕುಂಕುಮ, ಅರಿಶಿಣ,…
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
ವಿಜಯ ದರ್ಪಣ ನ್ಯೂಸ್…. ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ದೊಡ್ಡಬಳ್ಳಾಪುರ ಬೆಂ.ಗ್ರಾ ಜಿಲ್ಲೆ ಜುಲೈ,17:- ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ದೊಡ್ಡಬಳ್ಳಾಪುರ ಟೌನ್ ವಾರ್ಡ್ ನಂ 15 ವ್ಯಾಪ್ತಿಯ ರಂಗಪ್ಪ ಸರ್ಕಲ್ ಹಾಗೂ ವಾರ್ಡ್ ನಂ 04 ರ ಐ.ಬಿ ಸರ್ಕಲ್ ಬಳಿ ನೂತನ ಬಸ್ ತಂಗುದಾಣ, ಕೊಡಿಗೆಹಳ್ಳಿ ಹಾಗೂ ನಾಗಸಂದ್ರ…
ವಕ್ತಾರರು ಬೇಕಾಗಿದ್ದಾರೆ….
ವಿಜಯ ದರ್ಪಣ ನ್ಯೂಸ್…. ವಕ್ತಾರರು ಬೇಕಾಗಿದ್ದಾರೆ…. ದಯವಿಟ್ಟು ಗಮನಿಸಿ, ವಕ್ತಾರರ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು…… ಹುದ್ದೆಗಳ ಸಂಖ್ಯೆ : ಅನಿಯಮಿತ, ವಿದ್ಯಾರ್ಹತೆ : ಯಾವುದೇ ಅಕ್ಷರ ಜ್ಞಾನದ ಅವಶ್ಯಕತೆ ಇಲ್ಲ. ಸೇವಾ ಮನೋಭಾವ ಮಾತ್ರ. ಮೀಸಲಾತಿ : ಮನುಷ್ಯ ಎನಿಸಿಕೊಳ್ಳುವ ಎಲ್ಲರಿಗೂ ಅವಕಾಶವಿದೆ. ವಯಸ್ಸು : ಕನಿಷ್ಠ 25 ವರ್ಷ. ಗರಿಷ್ಠ ಮಿತಿ ಇಲ್ಲ. ಸಂಬಳ : ಯಾವುದೇ ನಿರೀಕ್ಷೆ ಬೇಡ. ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಿ ಬರಬಹುದು. ಕಾರ್ಯವ್ಯಾಪ್ತಿ :…
ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್
ವಿಜಯ ದರ್ಪಣ ನ್ಯೂಸ್… ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್ ದೊಡ್ಡಬಳ್ಳಾಪುರ ಬೆಂ.ಗ್ರಾ.ಜಿಲ್ಲೆ ಜು.16 : ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ
ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ ವಿಧಾನ ಸೌಧ ಬೆಂಗಳೂರು 15. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ…
ದೇವರ ಕೋಪ………
ವಿಜಯ ದರ್ಪಣ ನ್ಯೂಸ್… ದೇವರ ಕೋಪ……… ಹಿಂದೆ ಹಳ್ಳಿಗಳಿಗಾಗಿ ರಸ್ತೆಗಳನ್ನು ನಿರ್ಮಿಸಲಾಗುತ್ತಿತ್ತು, ಈಗ ರಸ್ತೆಗಳಿಗಾಗಿ ಹಳ್ಳಿಗಳನ್ನೇ ನಾಶಗೊಳಿಸಲಾಗುತ್ತಿದೆ…… ಹಿಂದೆ ಹಸಿವಿನಿಂದ ಸಾಕಷ್ಟು ಜನ ಸಾಯುತ್ತಿದ್ದರು, ಈಗ ಅತಿ ಹೆಚ್ಚು ಆಹಾರ ಸೇವನೆಯಿಂದ ಜನ ಸಾಯುತ್ತಿದ್ದಾರೆ…… ಹಿಂದೆ ಹೊಲಗದ್ದೆಗಳಲ್ಲಿ ದುಡಿದು ವಿಶ್ರಾಂತಿಗಾಗಿ ಜನ ಕಾಯುತ್ತಿದ್ದರು, ಈಗ ಅತಿಯಾದ ವಿಶ್ರಾಂತಿಯಿಂದಾಗಿ ದೈಹಿಕ ಚಟುವಟಿಕೆಗಳಿಲ್ಲದೆ ಜನ ಸಾಯುತ್ತಿದ್ದಾರೆ…….. ಹಿಂದೆ ಹತ್ತಾರು ಮಕ್ಕಳನ್ನು ತಂದೆ-ತಾಯಿಗಳು ಸಾಕುತ್ತಿದ್ದರು, ಈಗ ಒಬ್ಬನೇ ಮಗನಿಗೆ ತಂದೆ – ತಾಯಿಗಳೇ ಭಾರವಾಗುತ್ತಿದ್ದಾರೆ……. ಹಿಂದೆ ಹಣ ಅಂತಸ್ತು ಇಲ್ಲದೆ ಮನುಷ್ಯ…
ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ ಶಿಡ್ಲಘಟ್ಟ : ಸಾಲ ವಸೂಲಾತಿಯ ಪ್ರಮಾಣದಲ್ಲಿ ಹೆಚ್ಚಳ ಆದರೆ ಮಾತ್ರ ನಮಗೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ ಕಳೆದ ಮಾರ್ಚ್ ಗೆ ಶೇ53 ರಷ್ಟು ಸಾಲ ವಸೂಲಾತಿಯಾಗಿದ್ದು ಸೆಪ್ಟೆಂಬರ್ಗೆ ಶೇ 80 ರಷ್ಟು ಸಾಲ ವಸೂಲು ಮಾಡಲು ನಮ್ಮ ಬ್ಯಾಂಕಿನ ಆಡಳಿತ ಮಂಡಳಿ ಗುರಿ ಇಟ್ಟುಕೊಂಡಿದೆ ಎಂದು ಪಿ.ಎಲ್.ಡಿ. ಬ್ಯಾಂಕ್ ನ ಅಧ್ಯಕ್ಷ ಬಂಕ್ ಮುನಿಯಪ್ಪ ಅವರು ರೈತರಲ್ಲಿ…
ಅಣ್ಣೇಶ್ವರ, ಹಾಡೋನಹಳ್ಳಿ ಗ್ರಾ.ಪಂ ಗಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ
ವಿಜಯ ದರ್ಪಣ ನ್ಯೂಸ್…. ಅಣ್ಣೇಶ್ವರ, ಹಾಡೋನಹಳ್ಳಿ ಗ್ರಾ.ಪಂ ಗಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯ ಮಾತೃಶ್ರೀ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಕ್ಕೆ *ಲೊಕೋಸ್ ಕಾರ್ಯತಂತ್ರದ* ಪ್ರಗತಿ ಪರಿಶೀಲನೆ ಉದ್ದೇಶ ಮತ್ತು ಮುಂದಿನ ಹಂತದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲು *ರಾಷ್ಟ್ರೀಯ ಕಾರ್ಯಕ್ರಮ ವ್ಯವಸ್ಥಾಪಕರಾದ ಲಕ್ಷ್ಮಿಕಾಂತ್…
ಪ್ರೀತಿ ಎಂಬ ಮಾಯೆಯೊಳಗೆ ಸಿಲುಕಿ………
ವಿಜಯ ದರ್ಪಣ ನ್ಯೂಸ್…. ಪ್ರೀತಿ ಎಂಬ ಮಾಯೆಯೊಳಗೆ ಸಿಲುಕಿ……… ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು…………… ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ. ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು ಕಷ್ಟ, ಬೇಸರ,…