ಘಾಟಿ ಸುಬ್ರಮಣ್ಯ  ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್…..

 ಘಾಟಿ ಸುಬ್ರಮಣ್ಯ  ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 25:

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಆಹಾರ ನಾಗರಿಕ ಸರಬರಾಜು,ಗ್ರಾಹಕರ ವ್ಯವಹಾರಗಳ ಇಲಾಖೆ  ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ, ಎಸಿ ದುರ್ಗಶ್ರೀ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ , ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಾಧಿಕಾರದ ಅಧ್ಯಕ್ಷ ರಂಗಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.

ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ.  ಡಿಸೆಂಬರ್ 26 :

ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಶೈತ್ಯಗಾರ/ಮಂಜುಗಡ್ಡೆ ಘಟಕ ( ಕನಿಷ್ಠ 10 ಟನ್ ಸಂಗ್ರಹ ಸಾಮರ್ಥ್ಯ) ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 40 ರಷ್ಟು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು 2026 ರ ಜನವರಿ 09 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಛೇರಿ ಹಾಗೂ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಮೊಬೈಲ್ ಸಂಖ್ಯೆ 9880609384, 080-25634468 ಅನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.