ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ವಿಜಯ ದರ್ಪಣ ನ್ಯೂಸ್….

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ 2026-28ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರು ಪ್ರಮಾಣಪತ್ರ ನೀಡಿದರು.

ಇದೇ ಸಂದರ್ಭದಲ್ಲಿ  ನೂತನ ಅಧ್ಯಕ್ಷ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ. ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದರು.

ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು.

ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ.

ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು ನಟ, ನಟಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು.