ವಿಜಯ ದರ್ಪಣ ನ್ಯೂಸ್…..
ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಕೇಸ್ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 2 ದಿನ ಪೊಲೀಸ್ ಕಸ್ಟಡಿ

ಶಿಡ್ಲಘಟ್ಟ : ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಪ್ರಕರಣದ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಶಿಡ್ಲಘಟ್ಟದ JMFC ನ್ಯಾಯಾಲಯವು ಇಂದು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಿದೆ.
JMFC ನ್ಯಾಯಾಲಯದಲ್ಲಿ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಅವರ ಮುಂದೆ ವಿಚಾರಣೆ ನಡೆಯಿತು ಹೆಚ್ಚಿನ ತನಿಖೆಗಾಗಿ ಪೊಲೀಸರು ಎರಡು ದಿನಗಳ ಕಸ್ಟಡಿಗೆ ಕೋರಿದರು, ರಾಜೀವ್ ಗೌಡ ಪರ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದರು.

ಅಮೃತಾ ಗೌಡ ಪರ ವಾದ ಮಂಡಿಸಿದ ಪಿಪಿ ಮಹಮ್ಮದ್ ಖಾಜಾ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ರಾಜೀವ್ ಗೌಡ ಅವರ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದ್ದು, ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ..










