--Ads--

ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ

On: February 6, 2026 2:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ

ತಾಂಡವಪುರ ಫೆಬ್ರವರಿ ಆರು ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಮಟ ಮಟ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಹಲ್ಲಿನ ವ್ಯವಸ್ಥೆ ನುಡಿ ಅಧಿಕಾರಿಗಳನ್ನು ತೋರಟೆಗೆ ತೆಗೆದುಕೊಂಡು ಚಳಿ ಬಿಡಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ರವರು ದಿಢೀರ್ ಭೇಟಿಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ತಬ್ಬಿಬ್ಬಾಗಿ ನಿಂತರು. ಆಸ್ಪತ್ರೆಗೆ ಶಾಸಕರು, ನೇರವಾಗಿ ಶೌಚಾಲಯ, ಔಷಧೀಯ ಉಗ್ರಾಣ, ಶುದ್ಧೀಕರಿಸಿದ ವಸ್ತುಗಳ ಕೊಠಡಿ, ಮಕ್ಕಳ ಲಸಿಕಾ ವಿಭಾಗ, ಪುರುಷರ ಶೌಚಾಲಯ, ಆಡಳಿತ ವೈದ್ಯಾಧಿಕಾರಿಗಳ ಕಚೇರಿ, ಸ್ವಾಗತ ಮತ್ತು ನೊಂದಣಿ ವಿಭಾಗ, ಮಕ್ಕಳ ತುರ್ತು ಚಿಕಿತ್ಸಾ ಕೇಂದ್ರ ಸೇರಿದಂತೆ ವಿವಿಧ ವಿಭಾಗಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಕಂಡು ಹಾರಿಹಾಯ್ದರು. ಆಸ್ಪತ್ರೆಯಲ್ಲಿದ್ದ ಸಾರ್ವಜನಿಕರಿಂದ ಮಾಹಿತಿಯನ್ನು ಕಲೆ ಹಾಕಿದ ಶಾಸಕರು, ವೈದ್ಯರು ಮತ್ತು ಸಿಬ್ಬಂದಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

ಸರಿಯಾಗಿ ರಿಜಿಸ್ಟರ್ ಪುಸ್ತಕವನ್ನು ಮೆಂಟೇನೆನ್ಸ್ ಮಾಡುತ್ತಿಲ್ಲ. ಶೌಚಾಲಯಗಳನ್ನು ಸ್ವಚ್ಛತೆಯಿಂದ ಇಟ್ಟುಕೊಂಡಿಲ್ಲ. ರಾತ್ರಿ ಪಾಳಿಯಲ್ಲಿ ವೈದ್ಯರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವಧಿ ಮುಗಿದಿರುವ ಔಷಧಿಯನ್ನು ವಿತರಣೆ ಮಾಡುತ್ತಿರುವುದನ್ನು ಕಂಡು ಅಧಿಕಾರಿಗಳಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದರು.

ಹೆರಿಗೆ ಆಸ್ಪತ್ರೆಯಲ್ಲಿ ಕೆಲವೊಂದು ಸಮಸ್ಯೆಗಳು ನನ್ನ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಲ್ಲ. ಅವಧಿ ಮುಗಿದಿರುವ ಔಷಧಿಯನ್ನು ವಿತರಿಸಿರುವುದು ಕಂಡು ಬಂದಿದೆ. ಕುಡಿಯುವ ನೀರನ್ನು ಬದಲಾವಣೆ ಮಾಡುವಂತೆ ಸೂಚಿಸಿದ್ದೇನೆ. ರಾತ್ರಿ ಸಮಯದಲ್ಲಿ ವೈದ್ಯರು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಜನರೊಂದಿಗೆ ಸ್ಪಂದಿಸುತ್ತಿಲ್ಲ ಎಂಬುದು ತಿಳಿದು ಬಂದಿದೆ.

ಸರಿಯಾಗಿ ಕಾರ್ಯನಿರ್ವಹಿಸದೆ ಇರುವ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶೀಘ್ರದಲ್ಲಿಯೇ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣ ಆಸ್ಪತ್ರೆಯ ಪಕ್ಕದಲ್ಲಿರುವುದರಿಂದ ಕೆಲಸಗಳಿಗೆ ಹೋಗುವ ಜನರು ಆಸ್ಪತ್ರೆ ಆವರಣದಲ್ಲಿ ಪಾರ್ಕಿಂಗ್ ಮಾಡುತ್ತಿದ್ದಾರೆ ಇದನ್ನು ಮಾಡಬಾರದು. ಇದರಿಂದ ಆಸ್ಪತ್ರೆಯ ರೋಗಿಗಳಿಗೆ ತೊಂದರೆಯಾಗುತ್ತದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ಸೆಕ್ಯೂರಿಟಿ ಅವರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ

ಹಿರಿಯ ಕಾಂಗ್ರೆಸ್ ಮುಖಂಡ ಎಲ್ಐಸಿ ಪ್ರತಿನಿಧಿ ಬಿ ಎಂ ನಾಗರಾಜ್ ದಣಿ ಇನ್ನಿಲ್ಲ

ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ