--Ads--

ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಓಕುಳಿ ಉತ್ಸವ 

On: March 20, 2026 2:56 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಓಕುಳಿ ಉತ್ಸವ 

ತಾಂಡವಪುರ ಮಾರ್ಚ್ 20 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕಯ್ಯನ ಛತ್ರ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ಓಕುಳಿ ಉತ್ಸವವು ಬಹಳ ವಿಜೃಂಭಣೆ ಜರುಗಿತು.

ಯುಗಾದಿ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆಯಿಂದಲೂ ಸಹ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕಗಳು ನಡೆದವು ಅಲ್ಲದೆ ಈ ವರ್ಷವೂ ಯುಗಾದಿ ಹಬ್ಬದ ಪ್ರಯುಕ್ತ ಕಪಿಲ ನದಿಯಿಂದ ಗಂಗಾ ಪೂಜೆ ಮಾಡಿ ಕಳಸದಲ್ಲಿ ನೀರು ತುಂಬಿಕೊಂಡು ಹೆಣ್ಣು ಮಕ್ಕಳ ತಲೆ ಮೇಲೆ ಹೊತ್ತು ವಾದ್ಯಗೋಷ್ಠಿ ಮೂಲಕ ಮೆರವಣಿಗೆ ಮಾಡಿಕೊಂಡು ದೇವಾಲಯದ ಮುಂಭಾಗದಲ್ಲಿರುವ ಕೊಳದಲ್ಲಿ ಪೂಜೆ ಮಾಡಿ ನಂತರ ಗಂಗೆಯನ್ನು ಕೊಳದಲ್ಲಿ ಹಾಕುವ ಮೂಲಕ ದೇವಾಲಯದ ಮುಖ್ಯ ಅರ್ಚಕ ವೆಂಕಟೇಶ್ ರವರು ಒಕುಳಿ ಉತ್ಸವಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೊಸ ವರ್ಷದ ಈ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಪುರಸ್ಕಾರಗಳನ್ನು ನೆರವೇರಿಸುವ ಮೂಲಕ ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ ರೈತಾಪಿ ವರ್ಗದವರು ಸಮೃದ್ಧ ಬೆಳೆಯನ್ನು ಬೆಳೆಯುವಂತಾಗಲಿ ಭಕ್ತಾದಿಗಳಿಗೆ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಅವರು ಆಯಸ್ಸು ಆರೋಗ್ಯ ಸುಖ ಸಂತೋಷ ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.

ಇದು ವೇಳೆ ಬಂದಂತಹ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗವನ್ನು ಮಾಡಲಾಯಿತು. ಈ ಯುಗಾದಿ ಉತ್ಸವದಲ್ಲಿ ಚಿಕ್ಕಯ್ಯನ ಛತ್ರ ಬಂಚಳ್ಳಿ ಹುಂಡಿ ತಾಂಡವಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳು ಭಕ್ತಾದಿಗಳು ಭಾಗವಹಿಸಿ ದೇವರ ಕೃಪೆಗೆ ಪಾತರಾದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ