--Ads--

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇಂದಿರಾ ಕ್ರೀಡೋತ್ಸವ-2026

On: March 29, 2026 6:06 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇಂದಿರಾ ಕ್ರೀಡೋತ್ಸವ-2026

ಬೆಂಗಳೂರು: ಶಂಕರಮಠ ಮತ್ತು ಶಕ್ತಿಗಣಪತಿನಗರ ವಾರ್ಡ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇಂದಿರಾ ಕ್ರೀಡೋತ್ಸವ-2026 ಆಯೋಜಿಸಿದ್ದರು.

ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಜಿ.ಪದ್ಮಾವತಿರವರು, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ನಿಕಟಪೂರ್ವ ಬಿಬಿಎಂಪಿ ಸದಸ್ಯ ಎಸ್.ಕೇಶವಮೂರ್ತಿರವರು, ಆಡಳಿತ ಪಕ್ಷದ ಮಾಜಿ ನಾಯಕ ಎಮ್.ಶಿವರಾಜುರವರು, ಮಾಜಿ ಪಾಲಿಕೆ ಸದಸ್ಯ ಮಹದೇವಮ್ಮ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

ಮ್ಯೂಸಿಕಲ್ ಚೇರ್, ಲೇಮನ್ ಸ್ಪೂನ್ ರೇಸ್, ಬಾಳೆಹಣ್ಣು ತಿನ್ನುವ ಸ್ಪರ್ಧೆ, ರನ್ನಿಂಗ್, ಹಗ್ಗ-ಜಗ್ಗಾಟ, ಥ್ರೋಬಾಲ್, ನೀರು ತುಂಬುವ ಸ್ಪರ್ಧೆ, ಬಕೆಟ್ ನಲ್ಲಿ ಬಾಲ್ ಹಾಕುವ ಸ್ಪರ್ಧೆಯನ್ನು ಮಹಿಳೆಯರಿಗೆ ಏರ್ಪಡಿಸಲಾಗಿತ್ತು.

ಜಿ.ಪದ್ಮಾವತಿರವರು ಮಾತನಾಡಿ ಮಹಿಳೆಯರು ಕ್ರೀಡೆಯಲ್ಲಿ ಭಾಗವಹಿಸಬೇಕು, ಸೋಲು-ಗೆಲುವು ಮುಖ್ಯವಲ್ಲ. ವಿಶ್ವಾದ್ಯಂತ ಮಹಿಳೆಯರು ದಿನಾಚರಣೆ ಮಾಡುತ್ತಿದ್ದಾರೆ.

ಮನೆ ಕೆಲಸ ಮಾಡಿಕೊಂಡು ಇರಬೇಕು, ಶಿಕ್ಷಣ ಕೊಡಬಾರದು ಎಂಬುದು ನಿಯಮವನ್ನು ಹಾಕಿಕೊಂಡಿದ್ದರು. ಶ್ರೀಮತಿ ಸಾವಿತ್ರಿ ಬಾಪುಲೆ ಹೋರಾಟದ ಫಲ ಇಂದು ಮಹಿಳೆಯರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

ಇಂದಿರಾಗಾಂಧಿರವರು 16ವರ್ಷಕ್ಕಿಂತ ಹೆಚ್ಚು ಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಕಿತ್ತೂರುರಾಣಿ ಚೆನ್ನಮ್ಮ, ಓನಕೆ ಒಬ್ಬವ್ವ ರವರ ಸಾಧನೆಗಳು ಇಂದಿನ ಮಹಿಳೆಯರು ಅರಿತುಕೊಳ್ಳಬೇಕು.

ಮಹಿಳೆಯರು ಸ್ವಾಭಿಮಾನಿ, ಸ್ವಾವಲಂಭಿ ಬದುಕು ಸಾಗಿಸಲು ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳು ನೀಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನಮ್ಮ ಕಾಂಗ್ರೆಸ್ ಸರ್ಕಾರ ಕೊಟ್ಟಿದೆ. ಮಹಿಳೆಯರು ಸಬಲೆಯರು ಕುಟುಂಬದ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಶ್ರಮಿಸುವಳು ಎಂದು ಹೇಳಿದರು.

ಜೆ.ಹುಚ್ಚಪ್ಪರವರು ಮಾತನಾಡಿ ಪ್ರತಿಯೊಬ್ಬ ಪುರುಷನ ಯಶ್ವಸಿ ಹಿಂದೆ ಮಹಿಳೆಯರ ಪಾತ್ರ ಇರುತ್ತದೆ. ರಾಜಕೀಯ, ಕ್ರೀಡೆ, ಶಿಕ್ಷಣ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಾಧನೆ ಮಾಡಿದ್ದಾರೆ.

ಅತಿ ಕಿರಿಯ ವಯಸ್ಸಿನ ಸಂಸದೆ ಪ್ರಿಯಾಂಕ್ ಗಾಂಧಿರವರು ಲೋಕಸಭೆಯಲ್ಲಿ ಅತ್ಯಂತ ದಿಟ್ಟತನದಿಂದ ಮಾತನಾಡುತ್ತಾರೆ. ಪುರುಷ ಮತ್ತು ಮಹಿಳೆಯರು ಸರಿಸಮಾನ ಎಲ್ಲರು ಒಂದೇ. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಎಮ್.ಶಿವರಾಜು ಮಾತನಾಡಿ ಮಾಜಿ ಪ್ರಧಾನಿ ಇಂದಿರಾಗಾಂಧಿರವರ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ ಅಚರಣೆ ಮಾಡಲಾಗುತ್ತಿದೆ. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷದ ಸರ್ಕಾರ ಆದ್ಯತೆ, ಉತ್ತೇಜನ ನೀಡುತ್ತಿದೆ. ಮಹಿಳೆ ತಾಯಿ, ತಂಗಿ, ಅಕ್ಕನಾಗಿ ಇಡಿ ಕುಟುಂಬಕ್ಕೆ ಆಸರೆಯಾಗಿ ನಿಲ್ಲುತ್ತಾಳೆ ಎಂದು ಹೇಳಿದರು.

ಪಶ್ಚಿಮ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪಲ್ಲವಿಪ್ರಭು, ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಮೂರ್ತಿ,ಕೃಷ್ಣಪ್ಪ, ಶಿವಕುಮಾರ್,ಸುಧೀಂದ್ರ
ಜನಾರ್ಧನ್, ಹೇಮಲತಾ ಜನಾರ್ಧನ್, ಪರಿಸರ ರಾಮಕೃಷ್ಣ, ಶ್ರೀಮತಿ ಸಾವಿತ್ರಿ ರಾಮಕೃಷ್ಣ, ಮಹಿಳಾ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಶ್ರೀಮತಿ ವಿಶಾಲಾಕ್ಷೀ ಶಿವರಾಜು, ಶ್ರೀಮತಿ ಮಲ್ಲಿಕಾ, ಶ್ರೀಮತಿ ಸುಶೀಲಾ, ಶ್ರೀಮತಿ ಭವ್ಯ, ಶ್ರೀಮತಿ ನಂದಿನಿರವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸ್ಯಾಮ್‌ಸಂಗ್ AI ವೀಕ್’ 2026 ಘೋಷಣೆ: ಮೇ 8 ರಿಂದ ಅಲ್ಟಿಮೇಟ್ AI-ಚಾಲಿತ ಶಾಪಿಂಗ್ ಎಕ್ಸ್‌ಟ್ರಾವಗಾಂಜಾ ಪ್ರಾರಂಭ

ಮೇ 21ರಂದು ಕೇಂದ್ರ ಸರ್ಕಾರ ಆಡಳಿತ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ-ರಾಜ್ಯ ಯುವ ಕಾಂಗ್ರೆಸ್ ಸಮಿತಿ*

ಆನ್‌ಲೈನ್ ಔಷಧ ಮಾರಾಟ ಹಾಗೂ ಅಸಹಜ ಡಿಸ್ಕೌಂಟ್ ವಿರುದ್ಧ 20 ಮೇ 2026 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕರ್ನಾಟಕ ಫಾರ್ಮಾ ರಿಟೈಲರ್ಸ್ &ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್ ಭಾಗವಹಿಸುವುದಿಲ್ಲ : ರಾಜ್ಯಾಧ್ಯಕ್ಷ  ಸಿ .ಜಯರಾಮ್

ಡಿಸಿಎಂ ಡಿ.ಕೆ.ಶಿವಕುಮಾರ್  ಯುವಕರಿಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ: ಮಂಜುನಾಥಗೌಡ 

ಸ್ತ್ರೀ ಶಕ್ತಿಯ ಮತ ಒಲಿಸಿಕೊಂಡರೆ ಗೆಲುವು ಸುಲಭ: ಡಾ.ಬೈರಮಂಗಲ ರಾಮೇಗೌಡ

ಆಸ್ಟ್ರೇಲಿಯಾದ ಗ್ರಿಫಿತ್ ವಿಶ್ವವಿದ್ಯಾಲಯ ಮತ್ತು ಮಾಹೆಯ ಡ್ಯುಯಲ್ ಪಿಎಚ್ಡಿ ಕಾರ್ಯಕ್ರಮ ಮತ್ತು ಸಂಶೋಧನಾ ಶ್ರೇಷ್ಠತೆಯ ಉಪಕ್ರಮದೊಂದಿಗೆ ಭಾರತ-ಆಸ್ಟ್ರೇಲಿಯಾ ಶೈಕ್ಷಣಿಕ