ವಿಜಯ ದರ್ಪಣ ನ್ಯೂಸ್….
ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದ ಶಾಸಕರು

ತಾಂಡವಪುರ ಮೇ 19 2024-25ನೇ ಸಾಲಿನ ತೀವ್ರತರ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ನಂಜನಗೂಡು ತಾಲೂಕಿನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ನಂಜನಗೂಡಿನ ವಾಲ್ಮೀಕಿ ಸಮುದಾಯ ಭವನದಲ್ಲಿ ಶಾಸಕರು ವಿತರಣೆ ಮಾಡಿ ಶುಭ ಹಾರೈಸಿದರು.
ಈ ಯೋಜನೆಯ ಮೂಲಕ ವಿಶೇಷ ಚೇತನರ ದೈನಂದಿನ ಸಂಚಾರ ಸುಲಭವಾಗುವುದರೊಂದಿಗೆ, ಸ್ವಾವಲಂಬಿ ಬದುಕಿಗೆ ಮತ್ತಷ್ಟು ಪ್ರೇರಣೆ ದೊರಕಲಿದೆ ಎಂಬ ವಿಶ್ವಾಸವಿದೆ. ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ವಿಕಲಚೇತನರು ಸರ್ಕಾರದ ಯೋಜನೆಗಳನ್ನು ಆಯಾಯ ಕಾಲಕ್ಕೆ ಆನ್ಲೈನ್ ಮೂಲಕ ಸರ್ಕಾರಕ್ಕೆ ಅರ್ಜಿ ಹಾಕಿ ಯೋಜನನ್ನು ಪಡೆದುಕೊಂಡು ಇಂತಹ ಯೋಜನೆಗಳನ್ನು ಸ್ವರೂಪ ಮಾಡಿಕೊಳ್ಳಿ ಎಂದು ಶಾಸಕರು ಕಿವಿಮಾತುಗಳಿದರು
ಈ ವೇಳೆ ವಿಧಾನ ಪರಿಷತ್ ಸದಸ್ಯರು ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಆದ ಡಾ. ಯತೀಂದ್ರ ಸಿದ್ದರಾಮಯ್ಯ , ಶಾಸಕ ದರ್ಶನ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಸ್ಮಿತಾ ರಾಮು, TAPCMS ಅಧ್ಯಕ್ಷ ಕುರಹಟ್ಟಿ ಮಹೇಶ್ , EO ರಾಜೇಶ್ ಜರಾಲ್ಡ್ ಸೇರಿದಂತೆ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.










