--Ads--

ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಶುಭಕೋರಿದ ಶಾಸಕ ಬಿ ಎನ್ ರವಿಕುಮಾರ್ 

On: May 30, 2026 5:29 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಶುಭಕೋರಿದ ಶಾಸಕ  ಬಿ ಎನ್  ರವಿಕುಮಾರ್ 

ಶಿಡ್ಲಘಟ್ಟ : ನಗರದಲ್ಲಿ ಸಂಪ್ರದಾಯದಂತೆ ಐತಿಹಾಸಿಕ ಜಾಮೀಯಾ ಮಸೀದಿಯ ಬಳಿ ಜಮಾಯಿಸಿದ ಮುಸ್ಲಿಂ ಸಮಾಜದವರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು

ತ್ಯಾಗ ಮತ್ತು ಬಲೀದಾನದ ಸಂಕೇತ ಈದ್ ಉಲ್ ಅಝ್ ಹಾ (ಬಕ್ರೀದ್) ಹಬ್ಬವನ್ನು ಸಹಸ್ರಾರು ಮುಸ್ಲಿಂ ಬಾಂಧವರು ಶ್ರಧ್ಧಾಭಕ್ತಿಯಿಂದ ಆಚರಿಸಿದರು.

ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡರು ಆನಂತರ ಪೂರ್ವಜರ ಸಮಾಧಿಗಳ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

ಶಾಸಕರಾದ ಬಿ.ಎನ್.ರವಿಕುಮಾರ್ ಅವರು ಈದ್ಗಾ ಮೈದಾನಕ್ಕೆ ಬಂದು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿದರು. ಜಾಮಿಯಾ ಮಸೀದಿಯ ಸಮಿತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.

ಈ ವೇಳೆ ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ,ಎಸ್.ಎಂ.ರಮೇಶ್, ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರು ಹಾಗು ಇನ್ನೀತರರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now