--Ads--

ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ

On: June 2, 2026 5:55 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಚಿವ ಸ್ಥಾನ ಕೊಡದೇ ಹೋದರೆ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಎಚ್ಚರಿಕೆ

ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲಕಲ್, ಹುನಗುಂದ್ ಮತಕ್ಷೇತ್ರ, ಬಾಗಲಕೋಟೆ ಜಿಲ್ಲೆ ವತಿಯಿಂದ ಹುನಗುಂದ್ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯಾನಂದ್ ಎಸ್.ಕಾಶಪ್ಪನವರ್ ನೂತನ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು.

ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ , ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಿಶ್ವನಾಥಪಾಟೀಲ್, ಮಲ್ಲಣ್ಣ ಎಲೆಗಾರ , ಅಮರೇಶ್ ನಾಗೂರ್, , ಮುತ್ತಣ್ಣ ಕಲಗುಡಿ, ಮಹಾಂತೇಶ್ ನರಗುಂದ, ರವಿ ಹುಚ್ಚನೂರು, ಶಾಂತಣ್ಣರಾಘವೇಂದ್ರ ಧಾರವಾಡ, ಮೌನೇಶ್ ಬಂಡಿವಡ್ಡರ್, ನೀಲಪ್ಪ ಅಸೋಲಿ, ವಿಠ್ಠಲ್ ಜಕ್ಕ, ಸಿದ್ದ ಭಧ್ರಶೆಟ್ಟಿ, ಮನು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಅಬ್ದುಲ್ ರಜಾಕ್ ತಟಗಾರ ಮಾತನಾಡಿ ವಿಜಯಾನಂದ್ ಎಸ್.ಕಾಶಪ್ಪನವರ್ ಅವರ ಕುಟುಂಬ ಕಳೆದ 50 ವರ್ಷಗಳಿಂದ ಮನೆತನ ನಿಷ್ಠೆಯಿಂದ ಇದೆ. ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಕುಟುಂಬ ಎಂಬ ಕೀರ್ತಿ, ಹೆಗ್ಗಳಿಕೆ ಪಡೆದಿದೆ.

ಯುವ ನಾಯಕ, ಕ್ರಿಯಾಶೀಲರಾಗಿರುವ ಮತ್ತು ಕಾಂಗ್ರೆಸ್ ಪಕ್ಷ ಉತ್ತಮ ಸಂಘಟಕರಾಗಿರುವ ಶಾಸಕರಾದ ವಿಜಯಾನಂದ್ ಕಾಶಪ್ಪನವರ್ ರವರನ್ನು ನೂತನ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು.

ಕೃಷ್ಣ ನದೀ ನೀರು ಯೋಜನೆ ಜಾರಿಗೆ ತಂದಿದ್ದು , 60ಸಾವಿರ ಎಕರೆ ಇಸ್ರೇಲ್ ಮಾದರಿ ನೀರಾವರಿ ಯೋಜನೆ, ಶಿಕ್ಷಣಕ್ಕೆ ಒತ್ತು ಸ್ಮಾರ್ಟ್ ಕ್ಲಾಸ್ ಬೋರ್ಡ್ ಒದಗಿಸಿದರು. ಸರ್ಕಾರಿ ಶಾಲೆಗಳನ್ನು ಉನ್ನತಿಕರಿಸಿದರು.

ಹುನಗಂದ್-ಇಲಕಲ್ ಅವಳಿ ನಗರದಲ್ಲಿ ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣ,ಸಮುದಾಯ ಭವನ ಹಾಗೂ ಉತ್ತಮ ರಸ್ತೆಗಳ ನಿರ್ಮಾಣ, ಮರೋಳ್ ನಲ್ಲಿ ಏತಾ ನೀರಾವರಿ, ನಂದವಡಗಿ ಏತ ನೀರಾವರಿ, ಹನಿ ನೀರಾವರಿಗೆ ಒತ್ತು ನೀಡಿ ರೈತರ ಬಾಳಿಗೆ ಬೆಳಕಾದರು.

ತಾಲೂಕುನಲ್ಲಿ ಕ್ರೀಡೆಗಳಿಗೆ ಒತ್ತು ನೀಡಿ ಒಳಾಂಗಣ, ಹೊರಂಗಣ ಮತ್ತು ಈಜುಕೊಳ ನಿರ್ಮಾಣ ಮಾಡಿದ್ದಾರೆ. 2339 ನಿವೇಶನಗಳನ್ನು ವಸತಿ ರಹಿತರಿಗೆ ಮತ್ತು ವಸತಿ ಹಕ್ಕು ಪತ್ರ ನೀಡಿದ್ದಾರೆ.

ನಮ್ಮ ಕ್ಷೇತ್ರದಲ್ಲಿ 60ಕ್ಕೂ ಹೆಚ್ಚು ಜಾತಿ ಸಮುದಾಯದವರು ಇದ್ದಾರೆ ಎಲ್ಲರನ್ನ ಸಹೋದರತ್ವದಲ್ಲಿ ಬಾಳುತ್ತಿದ್ದೇವೆ.

ಶಾಸಕರಾಗಿ ವಿಜಯಾನಂದ್ ಎಸ್.ಕಾಶಪ್ಪನವರ್  ಯುವ ಕಾಂಗ್ರೆಸ್ , ಜಿಲ್ಲಾ ಕಾಂಗ್ರೆಸ್, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಯಲ್ಲಿ ಉತ್ತಮ ಸಂಘಟಕರಾಗಿ ಶ್ರಮಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಪಕ್ಷದ ಶ್ರೀಮತಿ ಸೋನಿಯಗಾಂಧಿ, ರಾಹುಲ್ ಗಾಂಧಿ, ಭಾವಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್ ರವರಲ್ಲಿ ನಮ್ಮ ಮನವಿ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭದಲ್ಲಿ ಜನಪ್ರಿಯ ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಅವರನ್ನು ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಇದ್ದರಿಂದ ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ 30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ.

ನಿಷ್ಟಾವಂತ ಕಾರ್ಯಕರ್ತ, ಶಾಸಕ ವಿಜಯಾನಂದ್ ಕಾಶಪ್ಪನವರ್ ರವರಿಗೆ ಮಂತ್ರಿ ಸ್ಥಾನ ಕೊಡದೇ ಹೋದರೆ ಹುನಗುಂದ ಮತಕ್ಷೇತ್ರ ಎಲ್ಲ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ನೀಡಲಾಗುವುದು ಎಂದು ಹೇಳಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಭರವಸೆ” ತಂಡದ ಡಿಜಿಟಲ್ಅಲೆ ಹಾವೇರಿಯ ಶೀಗಿಹಳ್ಳಿಗೂ ತಲುಪಿತು.

ವಿಜಯಾನಂದ್ ಕಾಶಪ್ಪನವರ್ ಸಚಿವ ಸ್ಥಾನ: ವೀರಶೈವ ಲಿಂಗಾಯಿತ- ಪಂಚಮಸಾಲಿ ಸಮಾಜ ಒತ್ತಾಯ

AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

ಕಾಯಿನ್‌ಸ್ವಿಚ್‌ನಿಂದ ಆರನೇ ಪ್ರೂಫ್ ಆಫ್ ರಿಸರ್ವ್ಸ್ (PoR) ವರದಿ ಬಿಡುಗಡೆ; ಗ್ರಾಹಕರ ಒಟ್ಟು ಆಸ್ತಿಗಿಂತ ₹613 ಕೋಟಿ ಅಧಿಕ ಮೀಸಲು ನಿಧಿ ನಿರ್ವಹಣೆ ಮಾಡುತ್ತಿರುವ ಕಾಯಿನ್‌ಸ್ವಿಚ್

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದಿಂದ ಪ್ರತಿಭಟನೆ

ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್ ನೇರ ಚುನಾವಣೆ ಎದುರಿಸಿಲ್ಲ, ಹಿಂಬಾಗಿಲ ರಾಜಕಾರಣಿ: ಕೆ.ಉಮೇಶ್ ಶೆಟ್ಟಿ