ರಾಜ್ಯ ಮಟ್ಟದ ಜಾನಪದ ಸಾಹಿತ್ಯ ಸಂಸ್ಕೃತಿ ಸಮಾವೇಶ: ಅಧ್ಯಕ್ಷರಾಗಿ ಹಿರಿಯ ಸಾಹಿತಿ ಸಾ.ಮ.ಶಿವಮಲ್ಲಯ್ಯ ಆಯ್ಕೆ
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಸಿದ್ಧನಹಳ್ಳಿ. ವತಿಯಿಂದ ದಿನಾಂಕ 28=06=2026 ಭಾನುವಾರ ಬೆಳಗ್ಗೆ 9 :00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಹಿರಿಯ ಸಾಹಿತಿಗಳು, ನಿವೃತ್ತ ಮುಖ್ಯೋಪಾಧ್ಯಯರಾದ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಶ್ರೀ ಸಾ.ಮ.ಶಿವಮಲ್ಲಯ್ಯ ಅವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಿರುವ *ರಾಜ್ಯ ಮಟ್ಟದ ಜಾನಪದ ಸಾಹಿತ್ಯ ಸಂಸ್ಕೃತಿ ಸಮಾವೇಶ* ದಲ್ಲಿ ಗುಂಪಿನಲ್ಲಿ ಜಾನಪದ ಗೀತೆ ಹಾಡುವವರು, ಜಾನಪದ ಹಾಡಿಗೆ ನೃತ್ಯ ಪ್ರದರ್ಶನ ನೀಡುವವರು, ಕವಿಗೋಷ್ಠಿಯಲ್ಲಿ ಭಾಗವಹಿಸಲಿಚ್ಚಿಸುವವರು (ಕನಿಷ್ಠ ಒಂದು ಕವನ ಸಂಕಲನ ಪ್ರಕಟಣೆ ಮಾಡಿರಬೇಕು) ಸಾಹಿತ್ಯ, ಸಂಸ್ಕೃತಿ, ಸಂಘಟನೆ, ಸಾಮಾಜಿಕ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ, (ಇದೂವರೆಗೂ ಪ್ರಶಸ್ತಿ, ಸನ್ಮಾನ ಪಡೆಯದಿರುವವರು) ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಸಂಬಂಧಿಸಿದವರು ಶಿಫಾರಸು ಮಾಡಲು ಬಿಬಿಜಿಎಸ್ ಟ್ರಸ್ಟ್ ಅಧ್ಯಕ್ಷ ಡಾ.ಸಿಸಿರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಸರು ನೋಂದಣಿಗೆ 15/6/2026 ಕೊನೆಯ ದಿನ.ಮಾಹಿತಿಗಾಗಿ:
ಮೊ.9448880985. ಸಂಪರ್ಕಿಸಲು ಕೋರಿದೆ.