ವಿಜಯ ದರ್ಪಣ ನ್ಯೂಸ್….
ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ ಧನಸಹಾಯ ಮಾಡಿದ ಶ್ರೀ ನಿಸರ್ಗ ನಾರಾಯಣಸ್ವಾಮಿ

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಆವರಣಕ್ಕೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರು ಇಂದು ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಗ್ರಾಮದ ‘ಶ್ರೀ ಗಂಗಾದೇವಿ ದೇವಾಲಯ ಸೇವಾ ಟ್ರಸ್ಟ್ (ರಿ.)’ ಹಾಗೂ ಸಮಸ್ತ ಗ್ರಾಮಸ್ಥರ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಗಂಗಾದೇವಿ, ಶ್ರೀ ಕೈವಾರ ಯೋಗಿನಾರೇಯಣರ ಶಿಲಾ ವಿಗ್ರಹಗಳು, ರಾಜಗೋಪುರ ಹಾಗೂ ಧ್ವಜಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಮುಂದಿನ ತಿಂಗಳು (ಜುಲೈ 1 ರಿಂದ ಜುಲೈ 3 ರವರೆಗೆ) ನಡೆಯಲಿವೆ. ಈ ಹಿನ್ನೆಲೆಯಲ್ಲಿ ದೇವಾಲಯದ ಸಿದ್ಧತೆಗಳನ್ನು ಮಾಜಿ ಶಾಸಕರು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು, ದೇವಾಲಯದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ಆಶಿಸಿದರು. ಭಗವಂತನ ಈ ಪವಿತ್ರ ಕಾರ್ಯಕ್ಕೆ ಕೈಜೋಡಿಸಿದ ಅವರು, ದೇವಾಲಯದ ಅಭಿವೃದ್ಧಿ ನಿಧಿಗೆ ವೈಯಕ್ತಿಕವಾಗಿ ಧನಸಹಾಯವನ್ನು ಚೆಕ್ ಮೂಲಕ ಹಸ್ತಾಂತರಿಸಿದರು.
”ಗ್ರಾಮಸ್ಥರು ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಒಗ್ಗಟ್ಟಿನಿಂದ ಕೈಗೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ. ಆ ದೇವರ ಆಶೀರ್ವಾದ ಸದಾ ಎಲ್ಲರ ಮೇಲಿರಲಿ.”
ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಎಸ್. ಮಹೇಶ್, ಗೌರವಾಧ್ಯಕ್ಷ ಚೌಡಪ್ಪನಹಳ್ಳಿ ಸಂಪಂಗಪ್ಪನವರು, ಕಾರ್ಯಾಧ್ಯಕ್ಷ ಜಿ.ಎ. ರವೀಂದ್ರ, ಪ್ರಧಾನ ಕಾರ್ಯದರ್ಶಿ ಮನೋಹರ್, ಕಾರ್ಯದರ್ಶಿ ರಾಮಾಂಜನೇಯ ದಾಸ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ರಾಜಣ್ಣ ಉಪಸ್ಥಿತರಿದ್ದರು.
ಹಾಗೂ ಪ್ರಮುಖ ಮುಖಂಡರುಗಳಾದ ರಾಜಣ್ಣ, ಅಶ್ವತ್, ಶಂಕರ್, ಮುನಿರಾಜು, ವೆಂಕಟಶಾಮಪ್ಪ, ಮುನಿವೆಂಕಟಸ್ವಾಮಿ ಸೇರಿದಂತೆ ಅನೇಕ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.











