--Ads--

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

On: June 26, 2026 3:13 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಜೂನ್ ೨೬, ೨೦೨೬

ಮಾರಿಷಸ್: ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಭಾಗವಹಿಸಲು ಮಾರಿಷಸ್ ಗೆ ಅಗಮಿಸಿರುವ ಶ್ರೀ ಪುತ್ತಿಗೆ ಶ್ರೀಗಳನ್ನು ಮಾರಿಷಸ್ ದೇಶದ ರಾಷ್ಟ್ರಪತಿಗಳಾದ ಶ್ರೀ ಧರಮ್ ಬೀರ್ ಗೋಕುಲ್ ಅವರು ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿ ಸುಮಾರು ನಲವತ್ತು ನಿಮಿಷಗಳ ಕಾಲ ಪ್ರಸ್ತುತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ಪೂಜ್ಯ ಶ್ರೀಗಳ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಭಾಗಿತ್ವದಿಂದ ಪ್ರಭಾವಿತರಾದ ರಾಷ್ಟ್ರಪತಿಯವರು ಉಡುಪಿ ಶ್ರೀಕೃಷ್ಣನ ಸ್ಥಾಪನೆಯ ಹಿನ್ನೆಲೆಯ ಮಧ್ವ ಸಿದ್ಧಾಂತದ ತಿರುಳನ್ನು ಶ್ರಿಗಳಿಂದ ತಿಳಿದುಕೊಂಡರು. ವಿಶ್ವದಾದ್ಯಂತ ಅಂತರ್ಮತೀಯ ಶಾಂತಿ ಸೌಹಾರ್ದತೆಗಾಗಿ ವಿಶ್ವ ಧಾರ್ಮಿಕ ನಾಯಕರ ಜೊತೆ ಶ್ರೀ ಪುತ್ತಿಗೆ ಶ್ರೀಗಳು ಕೈಜೋಡಿಸಿರುವುದನ್ನು ಶ್ಲಾಘಿಸಿದ ಮಾರಿಷಸ್ ರಾಷ್ಟ್ರಾಧ್ಯಕ್ಷರು ಮಾರಿಷಸ್ ನ ಪ್ರಜೆಗಳಿಗೆ ಮಾರ್ಗದರ್ಶನ ನೀಡುವಂತೆ ಕೋರಿದರು. ಶ್ರೀಗಳಿಂದ ಅನುಗ್ರಹ ಪಡೆದ ಅವರು ಕೋಟಿ ಗೀತಾ ಲೇಖನ ಯಜ್ಞದಲ್ಲಿ ಭಾಗಿಯಾಗಲು ಭಗವದ್ಗೀತೆಯ ಪುಸ್ತಕವನ್ನು ಸ್ವೀಕರಿಸಿದರು. ಭಾರತಕ್ಕೆ ಬಂದಾಗ ಉಡುಪಿಗೆ ಭೇಟಿ ನೀಡುವಂತೆ ಪೂಜ್ಯ ಶ್ರೀಗಳು ಅವರನ್ನು ಆಹ್ವಾನಿಸಿದರು

ವರದಿ: ಡಾ ಎ ಕೇಶವರಾಜ್

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕತಾರ್‌ನಲ್ಲಿ ಮಾನ್ಯ ಭಾರತೀಯ ರಾಯಭಾರಿ ಘನತೆವೆತ್ತ ಶ್ರೀ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಪ್ರಥಮ ಕಾರ್ಯದರ್ಶಿ ಶ್ರೀ ಹರೀಶ್ ಪಾಂಡೆ

ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮ ದಿನಾಚರಣೆಯ ಸಂಭ್ರಮಕ್ಕೆ ತಮ್ಮ ಅಭಿನಂದನೆಗಳನ್ನು ಸಲ್ಲಿಸುತ್ತ ಕಳೆದ ಒಂದು ದಶಕದ ಸವಿ ನೆನಪುಗಳನ್ನು ಮೆಲಕು ಹಾಕಿದ ಕತಾರ್ ಕನ್ನಡ ಸಂಘ 

ದೋಹಾದಲ್ಲಿ ಅದ್ಧೂರಿಯಾಗಿ ಜರುಗಿದ ಅಂತರರಾಷ್ಟ್ರೀಯ ಯೋಗ ದಿನಾಚರಣೆ; ಕರ್ನಾಟಕ ಸಂಘ ಕತಾರ್‌ನ ದಾಖಲೆ ಸಂಖ್ಯೆಯ ಭಾಗಿತ್ವಕ್ಕೆ ರಾಯಭಾರಿಗಳಿಂದ ಶ್ಲಾಘನೆ

ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್

ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ಸಂಘದಿಂದ ಭವ್ಯ ಗಿಡ ನೆಡುವ ಅಭಿಯಾನ