ವಿಜಯ ದರ್ಪಣ ನ್ಯೂಸ್….
ಶ್ರೀಕಂಟೇಶ್ವರ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷ ಬಸವೇಗೌಡರನ್ನು ಸನ್ಮಾನಿಸಿದ ಬಿಎಂ ರಾಮು

ತಾಂಡವಪುರ ಜುಲೈ 4 ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷರಾದ ಬಸವೇಗೌಡರನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿದರು.
ಬಳಿಕ ನೂತನ ಅಧ್ಯಕ್ಷ ಚಿನ್ನದ ಗುಡಿಹುಂಡಿ ಬಸವೇಗೌಡರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ನಿಮ್ಮ ಪ್ರೀತಿಯ ಅಭಿಮಾನಕ್ಕೆ ನಾನು ಸದಾ ಚಿರಋಣಿ ನಿಮ್ಮ ಈ ಪ್ರೀತಿ ಅಭಿಮಾನ ನಾನು ಇನ್ನು ಹೆಚ್ಚಿನ ರೀತಿಯ ಜವಾಬ್ದಾರಿಯಿಂದ ಕೆಲಸ ಮಾಡುವ ಶಕ್ತಿ ಬಂದಂತಾಗಿದೆ ನಿಮ್ಮ ಪ್ರೀತಿಯ ಅಭಿಮಾನ ಸದಾ ಹೀಗೆ ಇರಲಿ ಎಂದು ಮುಖಂಡರಲ್ಲಿ ವಿನಂತಿಸಿದರು
ಈ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಲು ಕಾರಣಕರ್ತರಾದ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಮಾಜಿ ಸಚಿವರು ಶಾಸಕ ಡಾಕ್ಟರ್ ಹೆಚ ಸಿ ಮಹದೇವಪ್ಪ,ಶಾಸಕ ದರ್ಶನ್ ಧ್ರುವನಾರಾಯಣ್ ಸಂಸದ ಸುನಿಲ್ ಬೋಸ್ ಹಾಗೂ ನಂಜನಗೂಡು ವರುಣ ವಿಧಾನಸಭಾ ಕ್ಷೇತ್ರದ ಹಲವಾರು ಮುಖಂಡರುಗಳು ನನ್ನನ್ನು ಆಯ್ಕೆ ಮಾಡಲು ಕಾರಣಕರ್ತರಾಗಿದ್ದಾರೆ ಅವರೆಲ್ಲರಿಗೂ ನಾನು ಈ ಸಂದರ್ಭದಲ್ಲಿ ತುಂಬು ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಎಂದು ಬಸವೇಗೌಡರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ಸಾರ್ವಜನಿಕ ವಿದ್ಯಾರ್ಥಿ ನಿಲಯದ ಟ್ರಸ್ಟಿನ ಮಾಜಿ ಸದಸ್ಯ ಹೆಗ್ಗಡಹಳ್ಳಿ ಹುಚ್ಚೇಗೌಡ ಚಿನ್ನದ ಗುಡಿಹುಂಡಿ ಜೈ ಸ್ವಾಮಿ ಶಿವ ಸ್ವಾಮಿ ಮಹೇಶ್ ಸೇರಿದಂತೆ ಮುಂತಾದವರು ಹಾಜರಿದ್ದರು











