--Ads--

ಚಿಕ್ಕತೇಕಹಳ್ಳಿಯಲ್ಲಿ ವಾಂತಿ-ಭೇದಿಯಾಗಿ ಅಸ್ವಸ್ಥಗೊಂಡಿದ್ದ 17 ಮಂದಿ ಚೇತರಿಕೆ 

On: July 6, 2026 1:24 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಚಿಕ್ಕತೇಕಹಳ್ಳಿಯಲ್ಲಿ ವಾಂತಿ-ಭೇದಿಯಾಗಿ ಅಸ್ವಸ್ಥಗೊಂಡಿದ್ದ 17 ಮಂದಿ ಚೇತರಿಕೆ 

ಅನಧಿಕೃತ ಘಟಕದಿಂದ ಪೂರೈಸುತ್ತಿದ್ದ ನೀರಿನಲ್ಲಿ ಇ-ಕೋಲಿ(E-CILI) ವೈರಸ್ ಪತ್ತೆ ,ನೀರನ್ನು ಕುದಿಸಿ ಕುಡಿಯುವಂತೆ ಗ್ರಾಮಸ್ಥರಿಗೆ ಆರೋಗ್ಯ ಇಲಾಖೆ ಸಲಹೆ !

ಶಿಡ್ಲಘಟ್ಟ : ತಾಲ್ಲೂಕಿನ ಚಿಕ್ಕತೇಕಹಳ್ಳಿಯಲ್ಲಿ ವಾಂತಿ-ಭೇದಿಯಾಗಿ ಅಸ್ವಸ್ಥಗೊಂಡಿದ್ದ 17 ಮಂದಿ ಚೇತರಿಸಿಕೊಂಡಿದ್ದು ಗ್ರಾಮದಲ್ಲಿ ಹೊಸ ಪ್ರಕರ ಯಾವುದು ಪತ್ತೆಯಾಗಿಲ್ಲ ತಿಳಿದುಬಂದಿದೆ.

ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಘಟಕವು ಪೂರೈಸುವ ಕುಡಿಯುವ ನೀರಿನಲ್ಲಿ ಇ-ಕೋಲಿ (E-COLI) ಬ್ಯಾಕ್ಟಿರಿಯಾ ಕಂಡು ಬಂದಿದ್ದು ಆ ನೀರು ಕುಡಿದ ಜನರು ಅಸ್ವಸ್ಥಗೊಂಡಿದ್ದರು ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.

ಜು.2ರಂದು ಹಲವರು ಅನಾರೋಗ್ಯಕ್ಕೀಡಾದ ಪ್ರಕರಣ ವರದಿಯಾಗುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿ, ಪರಿಹಾರ ಕ್ರಮಗಳನ್ನು ಕೈಗೊಂಡಿದ್ದು ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಜಿಲ್ಲಾ ನೀರು ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಿ ತನಿಖೆ ನಡೆಸಲಾಗಿತ್ತು.

ಕಲುಷಿತ ನೀರು ಪೂರೈಸುತ್ತಿದ್ದ ಘಟಕಕ್ಕೆ ನೋಟಿಸ್ ನೀಡಲಾಗಿದೆ ಇದರ ನೀರಿನ ಮಾದರಿಗಳನ್ನು ಜಿಲ್ಲಾ ನೀರು ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಪರೀಕ್ಷಿಸಿದ್ದು, ನೀರಿನಲ್ಲಿ ಇ-ಕೋಲಿ (E-COLI)ಬ್ಯಾಕ್ಟಿರಿಯಾ ಇರುವುದು ದೃಢಪಟ್ಟಿದೆ.

ಇದರಿಂದಲೇ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣಗಳು ಸಂಭವಿಸಿದೆ ಎನ್ನುವುದು ಸಹ ತಿಳಿದು ಬಂದಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಜೆಜೆಎಂ ಯೋಜನೆಯಡಿ ಸರಬರಾಜಾಗುತ್ತಿರುವ ಸರ್ಕಾರಿ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷಿಸಿದಾಗ ಯಾವುದೇ ರಾಸಾಯನಿಕ ಅಥವಾ ಜೈವಿಕ ಮಾಲಿನ್ಯ ಕಂಡುಬಂದಿಲ್ಲ ಎಂದು ಪ್ರಯೋಗಾಲಯ ವರದಿ ಸ್ಪಷ್ಟಪಡಿಸಿದೆ.

ತನಿಖೆಯಲ್ಲಿ ಗ್ರಾಮದ ನಿವಾಸಿ ಶ್ರೀನಿವಾಸ್
ಯಾವುದೇ ಪ್ರಾಧಿಕಾರದಿಂದ ಅನುಮತಿ ಪಡೆಯದೇ 20 ಲೀಟರ್ ಕ್ಯಾನ್ ಗಳಲ್ಲಿ ಕುಡಿಯುವ ನೀರನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ,
ಇದನ್ನು ಚಿಂತಾಮಣಿ ತಾಲೂಕಿನ ಚಂಗವಾರಹಳ್ಳಿಯ ಖಾಸಗಿ ಶುದ್ದೀಕರಣ ಘಟಕದಿಂದ ಖರೀದಿಸುತ್ತಿದ್ದರು , ಇದೇ ವೇಳೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ
ಇದೇ ವೇಳೆ ಘಟಕದ ಪರವಾನಗಿ ಅವಧಿಯು 2022ನೇ ಸಾಲಿನ ಮಾ-31ಕ್ಕೆ ಮುಗಿದಿದ್ದರೂ ನವೀಕರಣಗೊಳಿಸಿರಲಿಲ್ಲ ಅನಧಿಕೃತವಾಗಿ ನೀರು ಪೂರೈಸಲಾಗುತ್ತಿತ್ತು.

ಇದಕ್ಕೆ ಕೂಡಲೇ ಘಟಕ ಹಾಗೂ ಗ್ರಾಮದಲ್ಲಿ ನೀರು ಸಂಗ್ರಹಿಸಿದ್ದ ಟ್ಯಾಂಕ್‌ಗಳನ್ನು ಸೀಜ್ ಮಾಡಲಾಗಿದ್ದು, ನೀರು ಪೂರೈಸದಂತೆ ಸೂಚಿಸಲಾಗಿದೆ ಹಾಗೆಯೇ ಘಟಕದ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪ್ರಸ್ತುತ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಿ, ಅಗತ್ಯವುಳ್ಳ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ , ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ, ಜಾಗೃತಿ ಹಾಗೂ ನೀರನ್ನು ಕುದಿಸಿ ಕುಡಿಯುವಂತೆ ಸಾರ್ವಜನಿಕರಿಗೆ ಸಲಹೆ ನೀಡುತ್ತಿದ್ದಾರೆ,

ಗ್ರಾಮದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು,
ಹೊಸ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ,ಭವಿಷ್ಯದಲ್ಲಿ ಕಲುಷಿತ ನೀರಿನ ಪೂರೈಕೆ ಘಟನೆಗಳು ಮರುಕಳಿಸದಂತೆ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಮಾದರಿಗಳನ್ನು ನಿಯಮಿತವಾಗಿ ಪರೀಕ್ಷಿಸಲು, ಕುಡಿಯುವ ನೀರಿನ ಖಾಸಗಿ ಘಟಕಗಳ ಮೇಲ್ವಿಚಾರಣೆ ಸೇರಿದಂತೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ,ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿ ಹೊರಡಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಪ್ರಕಟಣೆಯಲ್ಲಿ ತಿಳಿಸಿದೆ.

ಜುಲೈ-2ರಂದು ಹಲವರು ಅನಾರೋಗ್ಯಕ್ಕೀಡಾದ ಪ್ರಕರಣ ವರದಿಯಾಗುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿ, ಪರಿಹಾರ ಕ್ರಮಗಳನ್ನು ಕೈಗೊಂಡಿದ್ದು ಗ್ರಾಮದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು,
ಆನಂತರ ಯಾವುದೇ ಹೊಸ ಪ್ರಕರಣಗಳು ಕಂಡುಬಂದಿಲ್ಲ, ನೀರನ್ನು ಕುದಿಸಿ ಕುಡಿಯಬೇಕು ಹಾಗು ಆರೋಗ್ಯ ಬಗ್ಗೆ ಕಾಳಜಿ ವಹಿಸಲು ಗ್ರಾಮಸ್ಥರಿಗೆ ಅರಿವು ಮೂಡಿಸಿದ್ದೇವೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now