ವಿಜಯ ದರ್ಪಣ ನ್ಯೂಸ್….
ಕಾಗಿನೆಲೆ ಶ್ರೀ ಪರಮಪೂಜ್ಯ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 20ನೇ ಪುಣ್ಯರಾಧನೆ

ತಾಂಡವಪುರ ಜುಲೈ 6 ಬೆಂಗಳೂರಿನ ಕೇತೋಹಳ್ಳಿಯಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠದಲ್ಲಿ ಇಂದು ಆಯೋಜಿಸಿದ್ದ ‘ಶಾಖಾಮಠದ ಪ್ರಥಮ ವಾರ್ಷಿಕೋತ್ಸವ ಹಾಗೂ ಪರಮ ಪೂಜ್ಯ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 20ನೇ ಪುಣ್ಯರಾಧನೆ’ ಸಮಾರಂಭದಲ್ಲಿ ಕನಕ ಗುರು ಪೀಠ ಶ್ರೀಗಳಿಂದ ನಗರ ಅಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಶಿವಣ್ಣ ,ರಾಜ್ಯಸಭಾ ಸದಸ್ಯ ಪ್ರೊಫೆಸರ್ ಎಂ ನಾಗರಾಜು, ಚಿತ್ರನಟ ದುನಿಯಾ ವಿಜಯ್ ಹಾಗೂ ಇನ್ನು ಮುಂತಾದ ಸಮಾಜದ ಮುಖಂಡರನ್ನು ಕನಕ ಗುರು ಪೀಠದ ಶ್ರೀಗಳು ಸನ್ಮಾನಿಸಿ ಆಶೀರ್ವಾದ ನೀಡಿದರು
ಈ ಸಂದರ್ಭದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರುಗಳಾದ ಡಾ. ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾಮಠದ ಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರನ್ನು ಸೇರಿದಂತೆ ವಿವಿಧ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಮ ಪೂಜ್ಯ ಶ್ರೀಗಳಿಂದ ಆಶೀರ್ವಾದ ಸಿಕ್ಕಿರುವುದು ನನ್ನ ಪುಣ್ಯ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ನೂತನ ವಿಧಾನ ಪರಿಷತ್ ಸದಸ್ಯ ಮಳವಳ್ಳಿ ಶಿವಣ್ಣ, ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್, ಚಲನಚಿತ್ರ ನಟ ದುನಿಯಾ ವಿಜಯ್ ಸೇರಿದಂತೆ ಅಪಾರ ಭಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು










