ವಿಜಯ ದರ್ಪಣ ನ್ಯೂಸ್….
ಕೃಷ್ಣರಾಜ ಸಾಗರ (KRS) ಜಲಾಶಯದ ಅಚ್ಚುಕಟ್ಟು ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಮಹತ್ವದ ಅವಲೋಕನ ಸಭೆ

ತಾಂಡವಪುರ ಜುಲೈ 13 ಈ ಬಾರಿ ಸರಿಯಾಗಿ ವರಣದೇವ ಕೃಪ ತೋರದ ಹಿನ್ನೆಲೆಯಲ್ಲಿ ವಿಕಾಸ ಸೌಧ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ರೈತರ ಜೀವನಾಡಿ ಕೃಷ್ಣರಾಜ ಸಾಗರ (KRS) ಜಲಾಶಯದ ಅಚ್ಚುಕಟ್ಟು ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಮಹತ್ವದ ಅವಲೋಕನ ಸಭೆ ನಡೆಯಿತು.
ಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಲಭ್ಯತೆ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ನಿರ್ವಹಣೆ, ರೈತರ ಹಿತಾಸಕ್ತಿ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಶಾಸಕರಾದ ಜಿ.ಟಿ. ದೇವೇಗೌಡ, ದರ್ಶನ್ ಧ್ರುವನಾರಾಯಣ್, ರಮೇಶ್ ಬಂಡಿ ಸಿದ್ದೇಗೌಡ, ರವಿ ಗಣಿಗ ಹಾಗೂ ಸಂಬಂಧಪಟ್ಟ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು










