--Ads--

ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು: ವಿದ್ವಾಂಸ ಡಾ. ಎಂ. ಬೈರೇಗೌಡ 

On: July 26, 2026 4:33 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು: ವಿದ್ವಾಂಸ ಡಾ. ಎಂ. ಬೈರೇಗೌಡ 

ವಿದ್ಯಾರ್ಥಿ ದಿಸೆಯಲ್ಲಿ ನಾಟಕ, ಸಂಗೀತ, ನೃತ್ಯದಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಂಡ ಮಕ್ಕಳು ದೊಡ್ಡ ಸಾಧಕರಾಗಿ ಹೊರಹೊಮ್ಮಿದ್ದಾರೆ ಎಂಬುದನ್ನು ಇತಿಹಾಸ ಸಾಬೀತು ಪಡಿಸಿದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ತಿಳಿಸಿದರು.

ಕೆರೆಮೇಗಳದೊಡ್ಡಿ ಬಳಿಯ ಮುದ್ದುಶ್ರೀ ದಿಬ್ಬದ ಸಮುಚ್ಛಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್. ಮುದ್ದಪ್ಪ ಚಿಕ್ಕಮ್ಮ ರಂಗಮAದಿರದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪ್ರತೀ ತಿಂಗಳು ನಾಲ್ಕನೇ ಶನಿವಾರ `ತಿಂಗಳ ತಳಿರು’ ಶೀರ್ಷಿಕೆಯಲ್ಲಿ ಸರಣಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆರಂಭಿಸಿದ್ದು, ಸರಣಿಯ ಮೂರನೇ ಕಾರ್ಯಕ್ರಮ ಎ.ಆರ್.ಕೆ. ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಕಾಡೆಮಿಯ ವಿದ್ಯಾರ್ಥಿಗಳು ನಡೆಸಿಕೊಟ್ಟ ನೃತ್ಯಾಂಜಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಗತ್ತಿನ ಇತಿಹಾಸವನ್ನು ಗಮನಿಸಿದಾಗ ಯಾವುದೇ ದಾರ್ಶನಿಕ ವ್ಯಕ್ತಿತ್ವವನ್ನು ರೂಪಸಿಕೊಂಡವರು ಕೇವಲ ಪಠ್ಯಪುಸ್ತಕಕ್ಕ ಜೋತುಬೀಳದೆ ಪಠ್ಯೇತರ ಓದನ್ನು ಮೈಗೂಡಿಸಿಕೊಂಡವರೇ ಆಗಿದ್ದಾರೆ. ಪರೀಕ್ಷಾ ದೃಷ್ಟಿಯಿಂದ ಓದುವ ಮಕ್ಕಳಿಗೂ, ಅದರಾಚೆಗೂ ಓದುವ ಮಕ್ಕಳಿಗೂ ಇರುವ ವ್ಯತ್ಯಾಸವನ್ನು ಗಮನಿಸಿದರೆ; ಪಠ್ಯೇತರ ಓದನ್ನು ಅಳವಡಿಸಿಕೊಂಡಿರುವವರ ಸಾಧನೆಯೇ ದೊಡ್ಡದು. ಈ ವಿಚಾರಗಳನ್ನು ಮನನ ಮಾಡಿಕೊಂಡು ಆಸಕ್ತ ಮಕ್ಕಳನ್ನು ಅವರವರ ಆಸಕ್ತಿಯನ್ನು ಗುರುತಿಸಿ, ಅಂತಹ ತರಬೇತಿಗಳನ್ನು ಕೊಡಿಸಿದರೆ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬಲ್ಲರು. ಹಾಗೆಯೇ ಉತ್ತಮ ಜೀವನ ನಿರ್ವಹಣೆಯ ಕಲೆಯನ್ನೂ ಅರಿಯಬಲ್ಲರು ಎಂದು ವಿವರಿಸಿದರು.

ಅತಿಥಿಗಳಾಗಿ ಪಾಲ್ಗೊಂಡ ರಂಗನಟ ಎ.ಆರ್. ರವಿಕುಮಾರ್ ಮಾತನಾಡಿ, ಮಕ್ಕಳ ಮನಸ್ಸನ್ನು ಅರಿಯದೆ, ಅವರ ಆಶೋತ್ತರಗಳಿಗೆ ಸ್ಪಂದಿಸದೆ, ಸದಾ ಬಲವಂತದಿAದ ಓದಿ ಶಾಲೆಗೆ ಮೊದಲ ಸ್ಥಾನದಲ್ಲಿ ನೀನಿರಬೇಕೆಂಬ ಪ್ರಕ್ರಿಯೆಯಲ್ಲಿ ತೊಡಗಿಸಿ ದೊಡ್ಡ ಅಪಾಯವನ್ನು ತಂದೊಡ್ಡುತ್ತಿದ್ದಾರೆ. ಆದರೆ ಈ ಬಗೆಯ ಲಲಿತ ಕಲೆಗಳ ಹಿಂದೆ ಓಡುವ ಮಕ್ಕಳು ಜೀವನವನ್ನೂ ಸುಗಮವಾಗಿ ನಿರ್ವಹಿಸಬಲ್ಲರು. ಬದುಕು ರೂಪಿಸಿಕೊಳ್ಳುವ ತಂತ್ರಗಳನ್ನೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಕಲಿಸಿಕೊಡಬಲ್ಲದು. ಇಂದಿನ ಶಿಕ್ಷಣ ವ್ಯವಸ್ಥೆ ಮಕ್ಕಳನ್ನು ಕೇವಲ ಅಂಕಗಳನ್ನು ಗಳಿಸುವ ಯಂತ್ರಗಳನ್ನಾಗಿ ತಯಾರಿಸುವ ಉದ್ಯಮವಾಗಿ ತನ್ನ ಕಬಂಧ ಬಾಹುಗಳಲ್ಲಿ ಬಂಧಿಸುತ್ತಿದೆ ಈ ಪ್ರವೃತ್ತಿ ನಿಂತು, ಮಕ್ಕಳ ಸರ್ವತೋಮುಖ ಬೆಳವಣಿಗೆಯ ಕಡೆಗೆ ನಮ್ಮ ಶಿಕ್ಷಣ ವ್ಯವಸ್ಥೆ ಗಮನ ಕೊಡಬೇಕೆಂದರು.

ರಾಮನಗರದ ಎ.ಆರ್.ಕೆ. ನೃತ್ಯ ಮತ್ತು ಸ್ಪೋರ್ಟ್್ಸ ಅಕಾಡೆಮಿಯ ಸ್ಥಾಪಕಿ ಹಾಗೂ ನೃತ್ಯಗುರು ಮಂಜುಳಾ ರವಿಕುಮಾರ್. ನೃತ್ಯಗುರು ಕೆ. ಜೀವನ್, ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಂಗೀತ ಶಿಕ್ಷಕಿ ಝಾನ್ಸಿರಾಣಿ ಪ್ರಾರ್ಥನೆ ಮಾಡಿದರು. ಮೂವತ್ತಕ್ಕೂ ಹೆಚ್ಚು ಮಕ್ಕಳು ಭರತನಾಟ್ಯ, ರೂಪಕ, ಜನಪದ ನೃತ್ಯ ಇತ್ಯಾದಿ ಹದಿನೈದಕ್ಕೂ ಹೆಚ್ಚು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಇದೇ ಸಂದರ್ಭದಲ್ಲಿ ಮರ, ಸಿಮೆಂಟ್, ಇತ್ಯಾದಿ ವೈವಿಧ್ಯಮಯ ಕಲೆಗಳನ್ನು ಮೈಗೂಡಿಸಿಕೊಂಡಿರುವ ಕುಶಲಕಲೆಗಳ ಕಲಾವಿದ ಸಿದ್ಧಲಿಂಗ ಬಡಿಗೇರ ಅವರನ್ನು ಗೌರವಿಸಲಾಯಿತು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಕ್ರೀಡೆ ಸ್ಪರ್ಧೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು

ಮಾಧ್ಯಮಗಳಿಲ್ಲದ ಕಾಲದಲ್ಲಿ… ಮೌಖಿಕ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ನಮ್ಮ ಗ್ರಾಮೀಣ ಜನರಿಗೆ ಸಲ್ಲುತ್ತದೆ: ಜನಪದ ವಿದ್ವಾಂಸ ಮೈಸೂರು ಗುರುರಾಜ್ 

ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ನಗರಸಭಾಧ್ಯಕ್ಷ ಕೆ.ಶೇಷಾದ್ರಿ

ನರಕವೆಂಬ ಮಾಯಾಲೋಕದಲ್ಲಿ ಬಿದ್ದು ಸ್ವರ್ಗದಲ್ಲಿದ್ದೇವೆಂದು ನಂಬಿ ಬದುಕುತ್ತಿದ್ದೇವೆ : ಗೊಲ್ಲಹಳ್ಳಿ ಶಿವಪ್ರಸಾದ್

ಗ್ರಾಮೀಣ ಭಾಗದಲ್ಲಿ ಸಂಸ್ಕೃತಿ ಪ್ರಸರಣ ಇಂದು ತುಂಬಾ ಅಗತ್ಯವೆನಿಸಿದೆ : ವೆಂಕಟೇಶ್ ಜೋಶಿ 

ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ : ಪ್ರೊ. ವ ನಂ ಶಿವರಾಮು