--Ads--

ವರದನಾಯಕನಹಳ್ಳಿ ಗ್ರಾಮದ ರೈತ ಜಗದೀಶ್‌ ಅವರ ಹಿಪ್ಪುನೇರಳೆ ತೋಟಕ್ಕೆ ಅಪರಿಚಿತರು ವಿಷಕಾರಿ ರಾಸಾಯನಿಕ ಸಿಂಪಡಣೆ ಸೊಪ್ಪಿಗೆ ಹಾನಿ !

On: August 1, 2026 3:28 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ವರದನಾಯಕನಹಳ್ಳಿ ಗ್ರಾಮದ ರೈತ ಜಗದೀಶ್‌ ಅವರ ಹಿಪ್ಪುನೇರಳೆ ತೋಟಕ್ಕೆ ಅಪರಿಚಿತರು ವಿಷಕಾರಿ ರಾಸಾಯನಿಕ ಸಿಂಪಡಣೆ ಸೊಪ್ಪಿಗೆ ಹಾನಿ !

ಶಿಡ್ಲಘಟ್ಟ : ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದ ರೈತ ಜಗದೀಶ್‌ ಅವರ ಹಿಪ್ಪುನೇರಳೆ ತೋಟಕ್ಕೆ ಅಪರಿಚಿತರು ವಿಷಕಾರಿ ರಾಸಾಯನಿಕ ಸಿಂಪಡಿಸಿದ ಪರಿಣಾಮ ರೇಷ್ಮೆ ಕೃಷಿಗೆ ಹಾನಿಯಾಗಿರುವ ಘಟನೆ ನಡೆದಿದೆ, ಘಟನೆಯಿಂದ ಸುಮಾರು 20 ಮೂಟೆ ಹಿಪ್ಪುನೇರಳೆ ಸೊಪ್ಪು ಹಾನಿಗೊಳಗಾಗಿದೆ.

ಸುಮಾರು 25 ವರ್ಷಗಳಿಂದ ರೇಷ್ಮೆ ಹುಳು ಸಾಕಾಣಿಕೆ ನಡೆಸುತ್ತಿರುವ ಜಗದೀಶ್ ಅವರು ಪ್ರತಿ ತಿಂಗಳು ರೇಷ್ಮೆ ಗೂಡು ಉತ್ಪಾದಿಸಿ ಜೀವನ ಸಾಗಿಸುತ್ತಿದ್ದಾರೆ, ರೇಷ್ಮೆ ಹುಳುಗಳು ಗೂಡು ಕಟ್ಟುವ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಎಂದಿನಂತೆ ಹಿಪ್ಪುನೇರಳೆ ಸೊಪ್ಪು ಕಟಾವು ಮಾಡಲು ತೋಟಕ್ಕೆ ತೆರಳಿದ ವೇಳೆ ವಿಷಕಾರಿ ರಾಸಾಯನಿಕದ ವಾಸನೆ ಬಂದಿದ್ದು, ಸ್ಥಳ ಪರಿಶೀಲಿಸಿದಾಗ ರಾಸಾಯನಿಕದ ಬಾಟಲಿಯ ಮುಚ್ಚಳ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಅನುಮಾನಗೊಂಡ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಕಟಾವು ಮಾಡಿದ ಸೊಪ್ಪಿನ ಸ್ವಲ್ಪ ಭಾಗವನ್ನು ಪ್ರತ್ಯೇಕವಾಗಿ ಕೆಲವು ರೇಷ್ಮೆ ಹುಳುಗಳಿಗೆ ನೀಡಿದಾಗ ಅವು ತಕ್ಷಣವೇ ಸಾವನ್ನಪ್ಪಿವೆ ಎಂದು ಜಗದೀಶ್ ತಿಳಿಸಿದ್ದಾರೆ.

ಸಮಯಕ್ಕೆ ಮುನ್ನ ಎಚ್ಚರಿಕೆ ವಹಿಸದಿದ್ದರೆ ಸುಮಾರು 60 ಮೊಟ್ಟೆಗಳ ರೇಷ್ಮೆ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇತ್ತು ಎಂದು ಅವರು ಹೇಳಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಶಿಡ್ಲಘಟ್ಟ ವಿಭಾಗದ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷಾ ಹಾಗೂ ರೇಷ್ಮೆ ವಿಸ್ತರಣಾಧಿಕಾರಿ ಜಗದೇವಪ್ಪ ಗುಗ್ಗರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .

ಈ ಬಗ್ಗೆ ಮಾತನಾಡಿದ ಅಕ್ಮಲ್ ಪಾಷಾ, ನನ್ನ 16 ವರ್ಷಗಳ ಸೇವಾ ಅವಧಿಯಲ್ಲಿ ಇಂತಹ ಘಟನೆ ಮೂರನೇ ಬಾರಿ ಕಂಡುಬಂದಿದೆ ,ರೈತರ ತೋಟಗಳಿಗೆ ವಿಷಕಾರಿ ರಾಸಾಯನಿಕ ಸಿಂಪಡಿಸುವುದು ಅತ್ಯಂತ ಖಂಡನೀಯ. ರೈತರು ಸೊಪ್ಪು ಕಟಾವು ಮಾಡುವ ಮುನ್ನ ತೋಟವನ್ನು ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಇದೇ ರೀತಿಯ ಘಟನೆ ಆರು ತಿಂಗಳ ಹಿಂದೆಯೂ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಗದೀಶ್‌ ಆಗ್ರಹಿಸಿದ್ದಾರೆ. ಹಂಡಿಗನಾಳ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮುನಿರೆಡ್ಡಿ ಮಾತನಾಡಿ, ಕೃಷಿಯನ್ನೇ ಅವಲಂಬಿಸಿರುವ ರೈತರಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವುದು ಗಂಭೀರ ಕೃತ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೇಲೂರಿನ ಸುಪ್ರಸಿದ್ಧ ಗ್ರಾಮದೇವತೆ ಶ್ರೀ ಗಂಗಮ್ಮದೇವಿಯ ಸನ್ನಿಧಾನದಲ್ಲಿ ನವಚಂಡಿಕಾಯಾಗ

“ತದ್ವಿರುದ್ಧ”‘ ಸಿನಿಮಾದ ಪ್ರಚಾರ ಅಭಿಯಾನವು ಶಿಡ್ಲಘಟ್ಟ ದ ಶ್ರೀ ವೆಂಕಟೇಶ್ವರ ಚಿತ್ರಮಂದಿರದ ಬಳಿ ಅದ್ಧೂರಿಯಾಗಿ ನಡೆಯಿತು

ರೈತರಿಗ ನೀರು ಕೊಡಿ, ರೈತರು ಎಲ್ಲವನ್ನೂ  ಸಮಾಜಕ್ಕೆ ಕೊಡಬಲ್ಲಷ್ಟು ಶಕ್ತರು : ಶ್ರೀ ಶ್ರೀ ಮಂಗಳಾನಂದನಾಥಸ್ವಾಮಿ

ಮನೆಗಳ್ಳತನ ಆಂಧ್ರದ ಕುಖ್ಯಾತ ಕಳ್ಳ ಖೆಡ್ಡಾಕ್ಕೆ ,2 ಲಕ್ಷ 80 ಸಾವಿರ ರೂ.ಗಳ ಮೌಲ್ಯದ ಚಿನ್ನ-ಬೆಳ್ಳಿ ಜಪ್ತಿ!

ತಾಲ್ಲೂಕನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮೊದಲ ಸ್ಥಾನಕ್ಕೇರಿಸುವ ಗುರಿಯನ್ನು ಶಿಕ್ಷಕರು ಸಾಕಾರಗೊಳಿಸಿ : ಶಾಸಕ ಬಿ.ಎನ್.ರವಿಕುಮಾ‌ರ್

ಮಳ್ಳೂರಿನ ಗೌರಮ್ಮ ಮಲ್ಲೇಶೆಟ್ಟಿ ಆರೋಗ್ಯ ಕೇಂದ್ರಕ್ಕೆ ಅಮೇರಿಕಾ ವಿಜ್ಞಾನಿಗಳು ಹಾಗು ಸಚಿವ ಕೆ.ಎಚ್.ಮುನಿಯಪ್ಪ ಭೇಟಿ