--Ads--

ಗ್ರಾಮೀಣ ಭಾಗದ ಬದುಕಿನ ಆರ್ಥಿಕತೆಗೆ ಹೈನುಗಾರಿಕೆಯಲ್ಲಿ ತೊಡಗಿ

On: August 4, 2026 8:10 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಗ್ರಾಮೀಣ ಭಾಗದ ಬದುಕಿನ ಆರ್ಥಿಕತೆಗೆ ಹೈನುಗಾರಿಕೆಯಲ್ಲಿ ತೊಡಗಿ 

ಶಿಡ್ಲಘಟ್ಟ : ಹೈನುಗಾರಿಕೆ ನಷ್ಟ ಉಂಟಾದಾಗ ಗುಂಪು ರಾಸು ವಿಮೆ ಯೋಜನೆ ಆರ್ಥಿಕ ಭದ್ರತೆ ಒದಗಿಸುತ್ತದೆ ರೈತರು ವಿಮೆ ಸೇರಿ ಇಲಾಖೆ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.

ನಗರದ ಚಿಮುಲ್ ಶಿಬಿರದ ಕಚೇರಿಯಲ್ಲಿ 2026-27ನೇ ಸಾಲಿನ ಗುಂಪು ರಾಸು ವಿಮೆ ಯೋಜನೆಯಡಿ 22 ಹೈನುಗಾರರಿಗೆ ಒಟ್ಟು 12.50 ಲಕ್ಷ ರೂ.ಗಳ ಮೊತ್ತದ ಪರಿಹಾರ ಚೆಕ್‌ ವಿತರಿಸಿ ಅವರು ಮಾತನಾಡಿದರು.
ಹೈನುಗಾರಿಕೆ ಗ್ರಾಮೀಣ ಆರ್ಥಿಕತೆ ಬೆನ್ನೆಲುಬಾಗಿದೆ ಅದರಲ್ಲಿ ಅನಿರೀಕ್ಷಿತ ಘಟನೆ ಜರುಗಿ ರಾಸುಗಳು ನಿಧನ ಹೊಂದಿದಾಗ ರೈತಾಪಿ ವರ್ಗಕ್ಕೆ ನಷ್ಷವೇ ಅಧಿಕ ಆ ಕಾರಣದಿಂದ ರೈತರು ರಾಸುಗಳಿಗೆ ವಿಮೆ ಮಾಡಿಸಿ ಎಂದು ಮನವಿ ಮಾಡಿದರು.

ಚಿಮುಲ್ ನಿರ್ದೇಶಕ ಹುಜುಗೂರು ರಾಮಣ್ಣ ಮಾತನಾಡಿ, ಚಿಮುಲ್ ಹೈನುಗಾರರ ಹಿತಾಸಕ್ತಿಗೆ ಬದ್ಧವಾಗಿದ್ದು, ವಿವಿಧ ಯೋಜನೆಗಳ ಮೂಲಕ ಅಗತ್ಯ ನೆರವು ನೀಡುತ್ತಿದೆ, ಗುಣಮಟ್ಟಕ್ಕೆ ಒತ್ತು ನೀಡುವ ಜತೆಗೆ ಪಶುಗಳ ಆರೋಗ್ಯದ ಕುರಿತು ಕಾಳಜಿವಹಿಸಬೇಕು ಮನವಿ ಮಾಡಿದರು.

ಚಿಮುಲ್‌ ಶಿಬಿರ ಉಪವ್ಯವಸ್ಥಾಪಕ ಡಾ.ರವಿಕಿರಣ್ ಮಾತನಾಡಿ, ಹೈನುಗಾರರು ವಿಮೆ ಸೇರಿ ಸರ್ಕಾರ ಹಾಗೂ ಚಿಮುಲ್‌ನಿಂದ ದೊರೆಯುವ ಸೌಲಭ್ಯ ಬಳಸಿಕೊಂಡು ಹೈನುಗಾರಿಕೆಯನ್ನು ಅಭಿವೃದ್ಧಿಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಸಹಕಾರಿ ಯೂನಿಯನ್ ನಿರ್ದೇಶಕ ಅಂಬರೀಷ್‌, ವಿಸ್ತರಣಾಧಿಕಾರಿ ಜಯಚಂದ್ರ, ನರಸಿಂಹಯ್ಯ, ಸತ್ಯನಾರಾಯಣ, ಮಂಜುನಾಥ್ ಹಾಗು ಸಿಬ್ಬಂದಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮ ಭಕ್ತಿಭಾವ ಸಂಭ್ರಮದಿಂದ ಆಚರಣೆ

ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ

ಹಿರಿಯರಿಗೆ ಹಾಗೂ ದಿವ್ಯಾಂಗರಿಗೆ ಆತ್ಮವಿಶ್ವಾಸ ನೀಡುವ ಕೆಲಸದಲ್ಲಿ ಸಾರ್ಥಕತೆಯ ಭಾವ: ಸಂಸದ ಡಾ.ಕೆ.ಸುಧಾಕರ್‌

ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ , ಸನ್ಮಾನ

ಶಿಡ್ಲಘಟ್ಟ ಪಿ.ಎಲ್‌.ಡಿ ಬ್ಯಾಂಕ್ ಸರ್ವ ಸದಸ್ಯರ ಮಹಾಸಭೆ ಸೆಪ್ಟಂಬರ್ -19ಕ್ಕೆ

“ಭಾವುಕ ಲೋಕದಲ್ಲಿ ಮಿಂದೆದ್ದ ಸೇವಾ ಸೌಭಾಗ್ಯ-ಬಾಗಿನೋತ್ಸವ” ಅರ್ಥಪೂರ್ಣ ಬಾಗಿನೋತ್ಸವ ನಡೆಸಿಕೊಟ್ಟ ಶಾಸಕ ಬಿ.ಎನ್.ರವಿಕುಮಾರ್