ವಿಜಯ ದರ್ಪಣ ನ್ಯೂಸ್…
ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಆಗಸ್ಟ್ 8 : ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರೈತರ ಜಮೀನುಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಅಧಿಕಾರದ ಜೊತೆ ರೈತರ ಜಮೀನುಗಳಿಗೆ ತೆರಳಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದರು
ಬಳಿಕ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ
ವರುಣ ವಿಧಾನಸಭಾ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ
ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಜಾನುವಾರುಗಳಿಗೆ ಮೇವು, ಬೆಳೆ ಹಾನಿ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಶಾಸಕರು ಸಮಗ್ರ ಚರ್ಚೆ ನಡೆಸಿ, ಜನರ ಹಿತಾಸಕ್ತಿಗೆ ಆದ್ಯತೆ ನೀಡಿ, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ರವರು, ZP CEO ಯುಕೇಶ್ ಕುಮಾರ್ ರವರು, SP ಮಲ್ಲಿಕಾರ್ಜುನ ಬಾಲದಂಡಿ ರವರು, ತಹಸೀಲ್ದಾರ್ ಸ್ಮಿತಾ ರಾಮು ರವರು, EO ಜೆರಾಲ್ಡ್ ರಾಜೇಶ್ ರವರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು











