--Ads--

ಸರ್ಕಾರಿ ನೌಕರರ ಸಂಘದ ಶಾಖೆಯಲ್ಲಿ 5 ಲಕ್ಷ 17 ಸಾವಿರ ರೂ.ಗಳ ಉಳಿತಾಯ : ಅದ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ

On: August 10, 2026 3:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸರ್ಕಾರಿ ನೌಕರರ ಸಂಘದ ಶಾಖೆಯಲ್ಲಿ 5 ಲಕ್ಷ 17 ಸಾವಿರ ರೂ.ಗಳ ಉಳಿತಾಯ : ಅದ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ

ಶಿಡ್ಲಘಟ್ಟ : ಸದಸ್ಯರ ಸಹಕಾರ ಹಾಗೂ ಪದಾಧಿಕಾರಿಗಳ ಪ್ರಾಮಾಣಿಕ ಪ್ರಯತ್ನದಿಂದ ಸಂಘ ಆರ್ಥಿಕವಾಗಿ ಸದೃಢವಾಗಿದೆ ನೌಕರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂಘ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು
ಅಧ್ಯಕ್ಷರಾದ ಕೆ.ಎನ್‌.ಸುಬ್ಬಾರೆಡ್ಡಿ ತಿಳಿಸಿದರು.
ನಗರದ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯಲ್ಲಿ 5 ಲಕ್ಷ 17 ಸಾವಿರ ರೂ.ಗಳ ಉಳಿತಾಯವಿದ್ದು, ಈ ಮೊತ್ತವನ್ನು ನೌಕರರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಸಂಘದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಹೇಳಿದರು.

ತಾಲ್ಲೂಕಿನ ವಿವಿಧ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರ ಸಹಕಾರದಿಂದ ಶಾಸಕರ ಕ್ಷೇತ್ರ ಅಭಿವೃದ್ಧಿ ನಿಧಿಯಡಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಸರ್ಕಾರಿ ನೌಕರರ ಭವನದ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಂಡು ನೌಕರರ ಬಳಕೆಗೆ ಲಭ್ಯವಾಗಲಿದೆ ಎಂದು ವಿವರಿಸಿದರು.

ಭವನವು ಸರ್ಕಾರಿ ನೌಕರರ ಸಭೆಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ಸಂಘದ ಚಟುವಟಿಕೆಗಳಿಗೆ ಶಾಶ್ವತ ಕೇಂದ್ರವಾಗಲಿದೆ ಇದರಿಂದ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಈ ವೇಳೆ ಸರ್ವ ಸದಸ್ಯರ ಮಹಾಸಭೆಯಲ್ಲಿ ಸಂಘದ ಹಿಂದಿನ ಸಾಲಿನ ಆಡಳಿತ ವರದಿ, ವಾರ್ಷಿಕ ಲೆಕ್ಕಪತ್ರ, ಆದಾಯ-ವೆಚ್ಚದ ವಿವರ ಹಾಗೂ ಮುಂದಿನ ಸಾಲಿನ ಕಾರ್ಯಯೋಜನೆಗಳನ್ನು ಮಂಡಿಸಿ ಅಂಗೀಕರಿಸಲಾಯಿತು.

ನೌಕರರ ಸೇವಾ ಹಿತಾಸಕ್ತಿ, ಆಡಳಿತಾತ್ಮಕ ಸಮಸ್ಯೆಗಳು, ನಿವೃತ್ತಿ ಸೌಲಭ್ಯಗಳು, ವಿವಿಧ ಇಲಾಖೆಗಳ ಸಮನ್ವಯ, ಸದಸ್ಯತ್ವ ವಿಸ್ತರಣೆ ಹಾಗೂ ಸಂಘದ ಆರ್ಥಿಕ ಸ್ಥಿರ ಕುರಿತು ಚರ್ಚೆ ನಡೆಯಿತು,ನೌಕರರ ಸಮಸ್ಯೆಗಳ ಪರಿಹಾರ ಹಾಗೂ ಸದಸ್ಯರ ಕಲ್ಯಾಣಕ್ಕಾಗಿ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸದಸ್ಯರು ಸಲಹೆ ನೀಡಿದರು, ನೌಕರರ ಏಕತೆ ಹಾಗೂ ಸಂಘಟಿತ ಪ್ರಯತ್ನದಿಂದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮೇಲೂರು ಮಂಜುನಾಥ್‌,ಪ್ರದಾನ ಕಾರ್ಯದರ್ಶಿ ಅಪ್ಪೇಗೌಡನಹಳ್ಳಿ ಕೆಂಪೇಗೌಡ, ಹಿರಿಯ ಉಪಾಧ್ಯಕ್ಷ ಮಧುಸೂದನ್, ಖಜಾಂಚಿ ವಸಂತ್ ಕುಮಾ‌ರ್, ನಿರ್ದೇಶಕ ಟಿಪ್ಪು ಸುಲ್ತಾನ್, ರಾಜ್ಯ ಪರಿಷತ್‌ ಸದಸ್ಯ ಟಿ.ಟಿ.ನರಸಿಂಹಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರಾಚಾರಿ, NPS ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್‌.ವಿ.ವೆಂಕಟರೆಡ್ಡಿ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now