ವಿಜಯ ದರ್ಪಣ ನ್ಯೂಸ್….
ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ

ತಾಂಡವಪುರ ಆಗಸ್ಟ್ 16 ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಸಲಾಯಿತು
ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕರು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು
ಇದೇ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ, ಸನ್ಮಾನಿಸಲಾಯಿತು.
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುತ್ತಾ, ಅವರ ಆಶಯದಂತೆ ಸಮೃದ್ಧ, ಸಮಾನತೆಯ ಮತ್ತು ಸೌಹಾರ್ದತೆಯ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ಮಾಡೋಣ. ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು
ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ತಹಸೀಲ್ದಾರ್ ಸ್ಮಿತಾ ರಾಮು ರವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ಮಾರುತಿ ರವರು ಶ್ರೀಕಂ ಡಿಸುವ ಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಿನ್ನದ ಗುಡಿಗುಂಡಿ, ಬಸವೇಗೌಡ , ನಗರಸಭಾ ಪೌರಯುಕ್ತ ಬಸವರಾಜ್ , DYSP ಧರ್ಮೇದ್ರ , EO ಜೆರಾಲ್ಡ್ ರಾಜೇಶ್ , BEO ಮಹೇಶ್ , ರೆಹನ ಬಾನು ಶಿವಪ್ಪ ದೇವರು , ಜೈ ರಾಮ್ ಗುರುಮಾಲ್ಲಪ್ಪ , ಶ್ರೀಧರ್ , ನಂಜಮಣಿ , ಪ್ರದೀಪ್ ಸೌಭಾಗ್ಯ ಚಂದನ್ , ಶ್ರೀಕಂಠ ನಾಯಕ , ಗಾಯತ್ರಿ ಮೋಹನ್ , ಗಂಗಾಧರ್ , ಶಶಿರೇಖಾ ಸಿದ್ಫಿಕ್ , ರಾಜೇಶ್ ಸೇರಿದಂತೆ ಹಲವು ಮುಖಂಡರು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು










