ವಿಜಯ ದರ್ಪಣ ನ್ಯೂಸ್….
ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ

ತಾಂಡವಪುರ ಆಗಸ್ಟ್ 18 ಮೈಸೂರಿನಲ್ಲಿವಿಶ್ವಕರ್ಮ ಜಾಗೃತಿ ವೇದಿಕೆ, ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಿದರು
ಬಳಿಕ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡುತ್ತಾ
ವಿಶ್ವಕರ್ಮ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಸಮಾಜದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ನೀಡುತ್ತವೆ. ಆ ದಿಕ್ಕಿನಲ್ಲಿ ವಿಶ್ವಕರ್ಮ ಸಮಾಜದ ಜಾಗೃತಿ ವೇದಿಕೆಯವರು ಮಾಡುತ್ತಿರುವುದು ಹೆಮ್ಮೆಯ ವಿಚಾರ ಇದೇ ರೀತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಮೂಲಕ ಅವರ ಶೈಕ್ಷಣಿಕ ಬೆಳವಣಿಗೆಗೆ ಸಮಾಜದವರು ಹೆಚ್ಚು ಹೊತ್ತು ನೀಡಬೇಕು ಎಂದು ಸಲಹೆ ನೀಡಿದರು
ಕಾರ್ಯಕ್ರಮದಲ್ಲಿ ಶ್ರೀ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಶ್ರೀ ಡಾ. ಕುಮಾರಸ್ವಾಮಿ ಸ್ವಾಮೀಜಿ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ಸುಜ್ಞಾನಮೂರ್ತಿ, ವಿಶ್ವಕರ್ಮ ಜಾಗೃತ ವೇದಿಕೆಯ ಅಧ್ಯಕ್ಷರಾದ ಕೆಂಡಗಣ್ಣ ವಿಶ್ವಕರ್ಮ, ಎನ್. ನಂದಕುಮಾರ್, ಚಿತ್ರನಟಿ ಭವ್ಯ ಹಾಗೂ ವಿಶ್ವಕರ್ಮ ಸಮುದಾಯದ ಹಲವು ಮುಖಂಡರು, ಸಮಾಜದ ಇನ್ನೂ ಅನೇಕ ಮುಖಂಡರು ವಿದ್ಯಾರ್ಥಿಗಳು ಜಾಗೃತಿ ವೇದಿಕೆ ಪ್ರಾಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು











