--Ads--

ಶ್ರೀ ಮಹರ್ಷಿ ವಾಲ್ಮೀಕಿ  ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

On: August 18, 2026 5:37 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶ್ರೀ ಮಹರ್ಷಿ ವಾಲ್ಮೀಕಿ  ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಆಗಸ್ಟ್ 18 ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಚಾರಿಟೇಬಲ್ ಟ್ರಸ್ಟಿನ ನೂತನ ಕಚೇರಿಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ಉದ್ಘಾಟನೆ ನೆರವೇರಿಸಿದರು

ಬಳಿಕ ಟ್ರಸ್ಟಿನ ಮುಖಂಡರು ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು. ಸನ್ಮಾನ ಗೌರವ ಸ್ವೀಕರಿಸಿ ಮಾತನಾಡಿದ ಸಚಿವ ಡಾ ಯತಿಂದ್ರ ಸಿದ್ರಾಮಯ್ಯನವರು ಇದು ಕಚೇರಿ ಅಥವಾ ಸಂಘಟನೆಯಾಗಿ ಉಳಿಯದೆ, ಶಿಕ್ಷಣ, ಸಾಮಾಜಿಕ ನ್ಯಾಯ, ಯುವಜನರ ಸಬಲೀಕರಣ ಹಾಗೂ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ವೇದಿಕೆಯಾಗಬೇಕು ಹಾಗೂ ಟ್ರಸ್ಟಿನ ಮುಖಂಡರುಗಳು ಸಮಾಜದ ಜನತೆಗೆ ಶಿಕ್ಷಣದ ಅರಿವು ಮೂಡಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಎಂದು ತಿಳಿಸಿದರು.

ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡುವ ಜೊತೆಗೆ, ಸಮುದಾಯದ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಟ್ರಸ್ಟ್‌ನ ಸೇವೆ ಹಾಗೂ ಸೌಲಭ್ಯಗಳು ತಲುಪುವಂತಾಗಬೇಕು ಎಂದು ಸಲಹೆ ನೀಡಿ, ಟ್ರಸ್ಟ್‌ನ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಶಾಸಕ ಜಿ ಟಿ ದೇವೇಗೌಡ ಹಾಗೂ ಕೆ.ಆರ್. ಕ್ಷೇತ್ರದ ಶಾಸಕ ಟಿ. ಶ್ರೀವತ್ಸ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು ಸಮಾಜದ ಮುಖಂಡ ಟಿ ದೇವರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು ಸಮಾಜದ ಮುಖಂಡರು ಟ್ರಸ್ಟಿನ ಸದಸ್ಯರುಗಳು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ 

ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ : ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಗ್ರಾಮಗಳ ಮೂಲಸೌಲಭ್ಯ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ದರ್ಶನ್ ಧ್ರುವನಾರಾಯಣ್