ವಿಜಯ ದರ್ಪಣ ನ್ಯೂಸ್….
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ರಾಜ್ಯದ ಅಭಿವೃದ್ಧಿ ಹರಿಕಾರ ದಿವಂಗತ ದೇವರಾಜು ಅರಸು ರವರ ಸ್ಮರಣೆ

ತಾಂಡವಪುರ ಆಗಸ್ಟ್21 ಮೈಸೂರು ಜಿಲ್ಲಾ ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ವಕೀಲರು ಆದ ಎಂಸಿ ಹುಂಡಿ ಶಿವಪ್ರಸಾದ್ ಜಿಲ್ಲ ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸಕಳ್ಳಿ ಬಸವರಾಜು ರವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಹಾಗೂ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜಯಂತಿಯ ಪ್ರಯುಕ್ತ ಮಹನೀಯರ ಭಾವಚಿತ್ರಗಳಿಗೆ ಪುಷ್ಪಕ್ಷನೆ ಮಾಡಿ ಸ್ಮರಿಸಿಕೊಂಡರು
ಇದೇ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಎಂಸಿ ಹುಂಡಿ ಶಿವಪ್ಪ ಸಾಬ್ ಹಾಗೂ ಸಕಳ್ಳಿ ಬಸವರಾಜ್ ರವರು ದೇಶ ಕಂಡ ಅಪ್ರತಿಮ ನಾಯಕ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹಾಗೂ ರಾಜ್ಯ ಕಂಡಂತಹ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಜಯಂತಿಯನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಆಗ ಮಾತ್ರ ಅವರ ಜಯಂತಿ ಆಚರಣೆಗೆ ಸಾರ್ಥಕತೆ ಅರ್ಥ ದೊರೆಯುತ್ತದೆ ಎಂದು ಹೇಳಿದ ಅವರು ಇಬ್ಬರು ಮಹಾ ನಾಯಕಗಳನ್ನು ಸ್ಮರಿಸಿಕೊಂಡರು
ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಕೀಲರಾದ ಎಂಸಿ ಹುಂಡಿ ಶಿವಪ್ರಸಾದ್ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯದರ್ಶಿ ಸಕಳ್ಳಿ ಬಸವರಾಜು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮಹಿಳಾ ಸದಸ್ಯರುಗಳು ಈ ಸಂದರ್ಭದಲ್ಲಿ ಹಾಜರಿದ್ದರು










