--Ads--

ಅತ್ತಿಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಧರ್ ಉಪಾಧ್ಯಕ್ಷರಾಗಿ ರೇಖಾ ಚಂದ್ರಹಾಸ್.

On: July 29, 2023 6:32 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಮೈಸೂರು ಜಿಲ್ಲೆ  ಪಿರಿಯಾಪಟ್ಟಣ ತಾಲೂಕು ಜುಲೈ 28.

 ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಗ್ರಾಮ ಪಂಚಾಯಿತಿಯಲ್ಲಿ  ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಂಗಾಧರ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ.ಎಂ ರುದ್ರೇಶ್ ನಾಮಪತ್ರ ಸಲ್ಲಿಸಿದ್ದು, ಗಂಗಾಧರ್ ರವರು 14 ಮತಗಳನ್ನು ಪಡೆಯುವ ಮೂಲಕ ಜಯಶೀಲರಾದರು. ಎಂ.ಎಂ ರುದ್ರೇಶ್ 5 ಮತಗಳನ್ನು ಪಡೆದು ಪರಾವಕೊಂಡರು. ಒಂದು ಮತ ತಿರಸ್ಕಾರಗೊಂಡಿದೆ.
ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಕಾಂಗ್ರೆಸ್ ಬೆಂಬಲಿತ ರೇಖಾ ಚಂದ್ರಹಾಸ್ ಆಯ್ಕೆಯಾದರು.

ನೂತನ ಅಧ್ಯಕ್ಷ ಗಂಗಾಧರ್ ಮಾತನಾಡಿ ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಹಾಗೂ ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಚುನಾವಣಾ ಅಧಿಕಾರಿಯಾಗಿ ಹಾರಂಗಿ ಇಲಾಖೆಯ ಎಇಇ ಲೋಹಿತ್ ಕಾರ್ಯನಿರ್ವಹಿಸಿದರು.
ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮನು,ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳಾ, ಸರೋಜಮ್ಮ, ಶಾರದಮ್ಮ, ಶೇಖರ್, ಲಲಿತಾರಮೇಶ್, ಹರೀಶ್, ಮಲ್ಲೇಶ್, ಪ್ರೀತಿ, ಸರಸ್ವತಿ, ರಾಜೇಗೌಡ, ಗಾಯಿತ್ರಿ, ಲಕ್ಷ್ಮಿ, ಅಶೋಕ್, ಸೌಮ್ಯ, ಮುರಳಿಧರ್, ಸುಬ್ರಹ್ಮಣ್ಯ, ಬಸವರಾಜು, ಹಿರಿಯ ಹಿರಿಯ ಕಾಂಗ್ರೆಸ್ ಮುಖಂಡ ಹೊಲದಪ್ಪ, ಸರಸ್ವತಿ ಕಾರ್ಯದರ್ಶಿ ಶಿವಣ್ಣ ಇದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ : ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಗ್ರಾಮಗಳ ಮೂಲಸೌಲಭ್ಯ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ದರ್ಶನ್ ಧ್ರುವನಾರಾಯಣ್

ಸಾರ್ವಜನಿಕರಿಗೆ ಜಾತಿ, ಆದಾಯ ಸೇವೆಗಳನ್ನು ಸಮಯಕ್ಕೆ ಒದಗಿಸಲು ಕಂದಾಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಸೂಚನೆ

ಭುಜಗಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ಇತ್ತೀಚಿಗೆ ಬಿದ್ದ ಮಳೆಯಿಂದ ಮನೆಗೋಡೆ ಕುಸಿತಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಸಹಾಯಧನ ವಿತರಣೆ