--Ads--

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

On: September 3, 2026 1:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ: ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ತಾಂಡವಾಪುರ ಸೆಪ್ಟೆಂಬರ್ 3ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ, ಮುಂದಿನ ಮುಂಗಾರಿನವರೆಗೆ ಮೇವಿನ ಕೊರತೆಯಾಗದಂತೆ ತುರ್ತು ಯೋಜನೆ ಸಿದ್ಧಪಡಿಸಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಆದ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು

ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರು ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹನೂರು ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಚಾಮರಾಜನಗರ ಜಿಲ್ಲೆಯ ಐದು ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಲಭ್ಯತೆ, ಜನರಿಗೆ ಉದ್ಯೋಗ ನೀಡುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಸರ್ಕಾರ ಬರ ನಿರ್ವಹಣೆಯ ಕುರಿತು ಬಹಳ ಗಂಭೀರವಾಗಿದೆ. ಅಧಿಕಾರಿಗಳು ಬರವನ್ನು ಹಗುರವಾಗಿ ಪರಿಗಣಿಸಬಾರದು ಎಂದರು. ಜನರಿಗೆ ಮೂಲಭೂತ ಅವಶ್ಯಕತೆಗಳಾದ ಕುಡಿಯುವ ನೀರು, ಜೀವನೋಪಾಯಕ್ಕೆ ಅಗತ್ಯವಿರುವ ಉದ್ಯೋಗ, ಆರೋಗ್ಯ, ಜಾನುವಾರುಗಳಿಗೆ ಮೇವು, ನೀರು ಒದಗಿಸುವುದು ನಮ್ಮ ಮುಂದಿರುವ ಸವಾಲುಗಳು. ಇದನ್ನು ಕಂದಾಯ ಇಲಾಖೆಯು ಇತರೆ ಸಂಬಂಧಿತ ಇಲಾಖೆಗಳ ಜೊತೆ ಸೇರಿ ಜನ-ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕಾಗಿದೆ ಎಂದು ಹೇಳಿದರು.

ಚಾಮರಾಜನಗರದಲ್ಲಿ ಜುಲೈ 2026 ರಿಂದ ಈಚೆಗೆ ಕೇವಲ 0.81 ಲಕ್ಷ ಮಾನವ ದಿನಗಳಷ್ಟು ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಆದರೆ ಕಳೆದ ವರ್ಷ ಇದೇ 2 ತಿಂಗಳುಗಳಲ್ಲಿ 2.50 ಲಕ್ಷ ಉದ್ಯೋಗಗಳನ್ನು ಸೃಜಿಸಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.67 ರಷ್ಟು ಕಡಿಮೆಯಾಗಿದೆ. ಈ ವರ್ಷ ಯಾಕೆ ಇಷ್ಟು ಕಡಿಮೆಯಾಗಿದೆ. ಜನರು ಉದ್ಯೋಗ ಕೇಳುತ್ತಿಲ್ಲವೇ? ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಅವರ ಅಧೀನ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಚಾಮರಾಜನಗರದಲ್ಲಿ ಕೃಷಿ ಬೆಳೆ ವಿಮೆಯೂ ಕಡಿಮೆಯಾಗಿದೆ. ರಾಜ್ಯದಲ್ಲಿ 49.64 ಲಕ್ಷ ರೈತರ ಅರ್ಜಿಗಳಿಗೆ ಹಾಗೂ 33,17,167 ಹೆಕ್ಟೇರ್‌ ಭೂಮಿಗೆ ಬೆಳೆ ವಿಮೆ ಮಾಡಿಸಲಾಗಿದೆ. ಆದರೆ ಚಾಮರಾಜನಗರದಲ್ಲಿ ಕೇವಲ 18,436 ಜನ 9,984 ಹೆಕ್ಟೇರ್‌ ಪ್ರದೇಶಕ್ಕೆ ಮಾತ್ರ ನೋಂದಾಯಿಸಿಕೊಂಡಿರುತ್ತಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನವಹಿಸಬೇಕು. ರೈತರಿಗೆ ಉತ್ತೇಜನ ನೀಡುವ ಕೆಲಸಗಳನ್ನು ಯಾಕೆ ಮಾಡಲಿಲ್ಲ. ಈ ರೀತಿ ಆಗಬಾರದು ಎಂದು ಎಚ್ಚರಿಸಿದರು.

ಚಾಮರಾಜನಗರದಲ್ಲಿ ವಾಡಿಕೆ ಮಳೆ 193 ಮಿ.ಮೀ ಆಗಬೇಕಿತ್ತು, ಆದರೆ ಸುರಿದಿರುವುದು ಕೇವಲ 87 ಮಿ.ಮೀ ಮಳೆ. ಇಲ್ಲೂ ಕೂಡ ಶೇ. 55 ರಷ್ಟು ಮಳೆ ಕೊರತೆಯಾಗಿದ್ದು, ಜಿಲ್ಲೆ ಡಿಫೀಷಿಯಟ್ ವರ್ಗದಲ್ಲಿದೆ. ವಿಶೇಷವಾಗಿ ಆಗಸ್ಟ್ ತಿಂಗಳಿನಲ್ಲಿ ಶೇ. 76 ರಷ್ಟು ಭಾರಿ ಮಳೆ ಕೊರತೆ ಉಂಟಾಗಿದೆ. ಜೂನ್ 1 ರಿಂದ ಆಗಸ್ಟ್ 31 ರವರೆಗಿನ ಮುಂಗಾರು ಮಳೆಯ ಅಂಕಿ-ಅಂಶಗಳನ್ನು ಗಮನಿಸಿದರೆ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಅತಿ ಹೆಚ್ಚು ಅಂದರೆ ಶೇ. 67 ರಷ್ಟು ಮಳೆ ಕೊರತೆಯಾಗಿದೆ ಹಾಗೂ ಯಳಂದೂರಿನಲ್ಲಿ ಶೇ. 65 ರಷ್ಟು ಮಳೆ ಕೊರತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಎಲ್ಲಾ 5 ತಾಲೂಕುಗಳನ್ನು (ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ಯಳಂದೂರು) ‘ತೀವ್ರ’ (Severe) ಬರಪೀಡಿತ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ ಎಂದರು.

ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಇಲ್ಲಿ 48 ಗ್ರಾಮಗಳಿಗೆ 48 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, 11 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ ಹಾಗೂ 11 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ. ಎಂದು ತಿಳಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 2,22,566 ಟನ್ ಮೇವು ಲಭ್ಯವಿದ್ದು, ಇದು ಸರಿಸುಮಾರು 23 ವಾರಗಳಿಗೆ ಸಾಕಾಗುತ್ತದೆ. ಆದರೆ, ಗುಂಡ್ಲುಪೇಟೆ ತಾಲೂಕಿನಲ್ಲಿ ಕೇವಲ 17 ವಾರಗಳಿಗೆ ಮಾತ್ರ ಮೇವು ಲಭ್ಯವಿದ್ದು, ಮುಂದಿನ ಮುಂಗಾರಿನವರೆಗೆ ಮೇವಿನ ಕೊರತೆಯಾಗದಂತೆ ತುರ್ತು ಯೋಜನೆಯನ್ನು ಸಿದ್ಧಪಡಿಸಬೇಕಿದೆ ಎಂದು ಸೂಚಿಸಿದರು.

ಗುಂಡ್ಲುಪೇಟೆಯಲ್ಲಿ ಕೇವಲ 17 ವಾರಗಳಿಗೆ ಮಾತ್ರ ಮೇವು ಲಭ್ಯವಿರುವುದರಿಂದ, ಅಲ್ಲಿ ತಕ್ಷಣವೇ ಮೇವು ಬ್ಯಾಂಕ್ ಸ್ಥಾಪನೆಗೆ ಮತ್ತು ಮುಂದಿನ ಮುಂಗಾರಿನವರೆಗೆ ಮೇವು ಒದಗಿಸಲು ತುರ್ತು ಯೋಜನೆ ಮಾಡಿಕೊಳ್ಳಬೇಕಾಗಿದೆ. ಮೇವಿನ ಕಿಟ್‌ಗಳನ್ನು ವಿತರಿಸಲು ಪಶುಸಂಗೋಪನಾ ಇಲಾಖೆಗೆ ಸರ್ಕಾರ ಈಗಾಗಲೇ 25 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ ಎಂದರು.

ಸಭೆಯಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ ಶಾಸಕರಾದ ಎಂ.ಆರ್. ಮಂಜುನಾಥ್, ಎ.ಆರ್.ಕ ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ದೃವನಾರಾಯಣ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಜಿಲ್ಲಾಧಿಕಾರಿ ಶ್ರೀರೂಪ, ಜಿ.ಪಂ. ಸಿಇ.ಒ. ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಎಂ.ಮುತ್ತುರಾಜು ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ

ಹಿರಿಯ ಕಾಂಗ್ರೆಸ್ ಮುಖಂಡ ಎಲ್ಐಸಿ ಪ್ರತಿನಿಧಿ ಬಿ ಎಂ ನಾಗರಾಜ್ ದಣಿ ಇನ್ನಿಲ್ಲ

ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ