ವಿಜಯ ದರ್ಪಣ ನ್ಯೂಸ್….
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ತಾಂಡವಪುರ ಸೆಪ್ಟೆಂಬರ್ 4: ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ ನೆರವೇರಿಸಿದರು
ಮೈಸೂರ್ ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರ ಗ್ರಾಮದ “ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ” ಕಾಮಗಾರಿಗೆ ಭೂಮಿ ಪೂಜೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರ ಜತೆಗೂಡಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಪಿರಿಯ ಪತ್ರಕರ್ತರು ಆದ ಕೆ. ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ಮೈಸೂರು ಪೇಯಿಂಟ್ಸ್ & ವಾರ್ನಿಷ್ ಲಿ. ಅಧ್ಯಕ್ಷ ಹೆಚ್.ಡಿ. ಗಣೇಶ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಿತಿನ್ ವೆಂಕಟೇಶ್, ಜಿ. ಪಂ. ಸಿಇಓ ಯುಕೇಶ್ ಕುಮಾರ್, ಕೆಪಿಸಿಸಿ ವಕ್ತಾರ ಎಂ. ಲಕ್ಷಣ್ ಸೇರಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಶರದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಗಣ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು











