ವಿಜಯ ದರ್ಪಣ ನ್ಯೂಸ್…..
ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ಸೆಪ್ಟೆಂಬರ್ 8 : ಶಾಸಕ ದರ್ಶನ್ ಧ್ರುವನಾರಾಯಣ್ ರವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರವ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ , 2026-27ನೇ ಶೈಕ್ಷಣಿಕ ಸಾಲಿನ ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿ ಶಾಸಕರು ಮಾಹಿತಿ ಪಡೆದುಕೊಂಡರು
ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಮಾತನಾಡಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಹಂತ ಹಂತವಾಗಿ ಬಗೆಹರಿಸುವುದು, ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು
ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಪ್ರಾಂಶುಪಾಲರಾದ ಪಿ. ಶಿವಣ್ಣ ರವರು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ , ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ , ಮಹೇಶ್ , ಸೋಮಣ್ಣ , ಕೃಷ್ಣಪ್ಪ , ರಮೇಶ್ , ಡಾ. ಈಶ್ವರ ಕನಕೆ. ಗುರುಮಾಲ್ಲಪ್ಪ , ಋಷವೇಂದ್ರ , ಯಶವಂತ್ ಹಾಜರಿದ್ದರು










