ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ

ವಿಜಯ ದರ್ಪಣ ನ್ಯೂಸ್….

ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ

ಕೇರಳದ ತಿರುವನಂತಪುರದಿಂದ ಕೊಡಗಿಗೆ ಅಕ್ರಮವಾಗಿ ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಾಲು ಸಮೇತ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಈ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಅನುಪ್ ಮಾದಪ್ಪ ರವರ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇವರು ಕೃತ್ಯಕ್ಕೆ ಬಳಸಿದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆ.ಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.