--Ads--

ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ಇಡೀ ಜಗತ್ತು ಖಂಡಿಸಬೇಕು:ಸೀಕಲ್ ರಾಮಚಂದ್ರಪ್ಪ

On: April 29, 2025 11:28 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ಇಡೀ ಜಗತ್ತು ಖಂಡಿಸಬೇಕು:ಸೀಕಲ್ ರಾಮಚಂದ್ರಪ್ಪ

ಶಿಡ್ಲಘಟ್ಟ : ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ಇಡೀ ಜಗತ್ತು ಜಾತಿ, ಧರ್ಮ, ಭಾಷೆ, ದೇಶಗಳ ಗಡಿ ಮೀರಿ ಎಲ್ಲರೂ ಖಂಡಿಸಬೇಕು ಮತ್ತು ಜಾಗತಿಕವಾಗಿ ಉಗ್ರರನ್ನು ಬೇರು ಸಮೇತ ಕಿತ್ತು ಹಾಕುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿ ಹಿಂದೂಗಳನ್ನು ಹುಡುಕಿ ಹುಡುಕಿ ಗುಂಡಿಕ್ಕಿ ಕೊಂದದ್ದು ಕೇವಲ ಉಗ್ರವಾದವಲ್ಲ. ಬದಲಿಗೆ ಹಿಂದೂಗಳನ್ನೆ ಗುರಿಯಾಗಿಸಿಕೊಂಡು ನಡೆದ ಹೇಯ ಪೈಶಾಚಿಕ ಕೃತ್ಯ ಇದಾಗಿದೆ ಎಂದರು.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಯಾರು ಕೂಡ ರಾಜಕೀಯ ಮಾಡದೆ ಕೇವಲ ಉಗ್ರವಾದವನ್ನಷ್ಟೆ ಖಂಡಿಸಬೇಕು, ಉಗ್ರರನ್ನು ನಾಶ ಮಾಡಲು ಕೇಂದ್ರ ಸರ್ಕಾರಕ್ಕೆ ನೈತಿಕ ಬೆಂಬಲ ಕೊಡುವ ಕೆಲಸ ನಮ್ಮೆಲ್ಲರಿಂದಲೂ ದೇಶದ ಹಿತದೃಷ್ಟಿಯಿಂದ ಆಗಬೇಕೆಂದರು.

ಭದ್ರತಾ ವೈಫಲ್ಯ ಇನ್ನಿತರೆ ಹತ್ತಾರು ಕಾರಣಗಳು ಈ ಘಟನೆಗೆ ಕಾರಣವಾಗಿರಬಹುದು. ಆದರೆ ಅವುಗಳ ಬಗ್ಗೆ ಚರ್ಚಿಸಿ ವಾದ ಮಾಡುವ ಸಮಯ ಇದಲ್ಲ. ಒಂದು ವೇಳೆ ನಾವು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಇದೀಗ ಮಾಡಿದರೆ ಅದಕ್ಕೆ ತಕ್ಕ ಬೆಲೆಯನ್ನು ನಾವೆಲ್ಲರೂ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆದ್ದರಿಂದ ಎಲ್ಲವನ್ನೂ ಬಿಟ್ಟು ದೇಶದ ಭದ್ರತೆ, ಐಕ್ಯತೆ, ಭಾರತೀಯರ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಟಿಯಿಂದ ನಾವು ಚಿಂತಿಸಬೇಕಾದ ಅನಿವಾರ್ಯ ಸ್ಥಿತಿ ಇದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂತಹ ಪರಿಸ್ಥಿತಿಯನ್ನು ದಿಟ್ಟವಾಗಿ ನಿಭಾಯಿಸುವ ಶಕ್ತಿ, ಧೈರ್ಯ, ದೂರದೃಷ್ಟಿಯುಳ್ಳವರಾಗಿದ್ದು ಇಡೀ ದೇಶದಲ್ಲಿ ಉಗ್ರರ ಸಂತತಿ ಇಲ್ಲದಂತೆ ಮಾಡಿ ವಿಶ್ವ ನಾಯಕ, ವಿಶ್ವ ಗುರು ಎಂದು ಸಾಭೀತುಪಡಿಸಬೇಕೆಂದು ಆಗ್ರಹಿಸಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮ ಭಕ್ತಿಭಾವ ಸಂಭ್ರಮದಿಂದ ಆಚರಣೆ

ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ

ಹಿರಿಯರಿಗೆ ಹಾಗೂ ದಿವ್ಯಾಂಗರಿಗೆ ಆತ್ಮವಿಶ್ವಾಸ ನೀಡುವ ಕೆಲಸದಲ್ಲಿ ಸಾರ್ಥಕತೆಯ ಭಾವ: ಸಂಸದ ಡಾ.ಕೆ.ಸುಧಾಕರ್‌

ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ , ಸನ್ಮಾನ

ಶಿಡ್ಲಘಟ್ಟ ಪಿ.ಎಲ್‌.ಡಿ ಬ್ಯಾಂಕ್ ಸರ್ವ ಸದಸ್ಯರ ಮಹಾಸಭೆ ಸೆಪ್ಟಂಬರ್ -19ಕ್ಕೆ

“ಭಾವುಕ ಲೋಕದಲ್ಲಿ ಮಿಂದೆದ್ದ ಸೇವಾ ಸೌಭಾಗ್ಯ-ಬಾಗಿನೋತ್ಸವ” ಅರ್ಥಪೂರ್ಣ ಬಾಗಿನೋತ್ಸವ ನಡೆಸಿಕೊಟ್ಟ ಶಾಸಕ ಬಿ.ಎನ್.ರವಿಕುಮಾರ್