--Ads--

ನಗರಸಭೆ ಸದಸ್ಯತ್ವದಿಂದ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್  ತಡೆ

On: May 7, 2025 7:22 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ನಗರಸಭೆ ಸದಸ್ಯತ್ವದಿಂದ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್  ತಡೆ

ಶಿಡ್ಲಘಟ್ಟ : ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ನಗರಸಭೆಯ 7 ಮಂದಿ ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಆದೇಶ ಮಾಡಿದೆ.

ಕಳೆದ 2024 ರ ಸೆಪ್ಟೆಂಬರ್ 5 ರಂದು ನಡೆದಿದ್ದ ನಗರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದ ಕಾಂಗ್ರೆಸ್‌ನ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಏಪ್ರಿಲ್ 29 ರಂದು ಆದೇಶ ನೀಡಿದ್ದರು.

ಜಿಲ್ಲಾಧಿಕಾರಿಗಳ ಅನರ್ಹ ಆದೇಶದ ವಿರುದ್ದ 7 ಮಂದಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಾಧೀಶರು ಮುಂದಿನ ಜೂನ್ 3 ರವರೆಗೂ ಜಿಲ್ಲಾಧಿಕಾರಿಗಳ ಅನರ್ಹತೆಯ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿದ್ದಾರೆ.

ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದಾರೆ ಎಂದು ದೂರು ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಮತ್ತು ನಗರಸಭೆ ಸದಸ್ಯ ಹಾಗೂ ಅಧ್ಯಕ್ಷ ಸ್ಥಾನಕ್ಕೆ ರ್ಸ್ಪಸಿದ್ದ ಎಂ.ಶ್ರೀನಿವಾಸ್ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ 3ನೇ ವಾರ್ಡ್ ನ ಸದಸ್ಯೆ ಎಸ್.ಚಿತ್ರಮನೋಹರ್, 10 ನೇ ವಾರ್ಡ್ ನ ಸದಸ್ಯ ಎಸ್.ಎಂ.ಮಂಜುನಾಥ್, 11 ನೇ ವಾರ್ಡ್ ನ ಸದಸ್ಯ ಎಲ್.ಅನಿಲ್ ಕುಮಾರ್, 16 ನೇ ವಾರ್ಡ್ ನ ಸದಸ್ಯ ಎನ್.ಕೃಷ್ಣಮೂರ್ತಿ, 22 ನೇ ವಾರ್ಡ್ ನ ಟಿ.ಮಂಜುನಾಥ್, 28 ನೇ ವಾರ್ಡ್ ನ ಜಭೀವುಲ್ಲಾ ಮತ್ತು 7 ನೇ ವಾರ್ಡ್ ನ ಶಿವಮ್ಮ ಮುನಿರಾಜು ಅವರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು, ಇದೀಗ ಈ ಆದೇಶಕ್ಕೆ ಹೈ ಕೋರ್ಟ್ ತಾತ್ಕಾಲಿಕ ತಡೆ ನೀಡಿ ಆದೇಶ ಮಾಡಿದೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ