--Ads--

ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ

On: June 5, 2025 3:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ

ತಾಂಡವಪುರ ಮೈಸೂರು  ಜೂನ್ : ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಏಳು ತಿಂಗಳ ವೇತನ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಎದುರು  ಶಾಂತಿಯುತ ಪ್ರತಿಭಟನೆ ನಡೆಸಿದರು.

ಉದ್ಯೋಗ ಖಾತ್ರಿಯ ಅನುಷ್ಠಾನಕ್ಕಾಗಿ ದುಡಿಯುತ್ತಿರುವ ನೌಕರರಿಗೆ ಕಳೆದ 2024ರ ನವೆಂಬರ್ ತಿಂಗಳಿಂದ ವೇತನ ಬಿಡುಗಡೆಯಾಗಿರುವುದಿಲ್ಲ. ಈ ಕಾರಣದಿಂದ ಜೀವನ ಹಾಗೂ ಕುಟುಂಬ ನಿರ್ವಹಣೆ ಅತ್ಯಂತ ಕಷ್ಟಕರವಾಗಿದ್ದು, ಕೂಡಲೇ ವೇತನ ಪಾವತಿಸುವಂತೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಜಿಲ್ಲಾ ಸಂಘದಿಂದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಮನವಿ ನೀಡಿದರು.

ವೇತನ ಸ್ಥಗಿತಗೊಂಡಿರುವುದರಿಂದ ನೌಕರರು ಸಾಲ ಮಾಡಿ ಜೀವನ ಸಾಗಿಸುವಂತಾಗಿದೆ. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಹಂತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ವೇತನವಿಲ್ಲದೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಮಕ್ಕಳ ಶಾಲಾ ಪ್ರಾವೇಶಾತಿ ಶುಲ್ಕ, ವಯಸ್ಸಾದ ತಂದೆ-ತಾಯಿಗಳ ಆರೋಗ್ಯ ಸಮಸ್ಯೆಗೆ ಆಸ್ಪತ್ರೆ ವೆಚ್ಚ, ದಿನನಿತ್ಯ ಖರ್ಚುಗಳನ್ನು‌ ನಿಭಾಯಿಸುವುದು ಸವಾಲಾಗಿದೆ ಎಂದು ಸಿಇಒ ಮುಂದೆ ಅವಲತ್ತುಕೊಂಡರು.

ಇದೇ ವೇಳೆ  ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಅವರಿಗೆ ಜಿಲ್ಲಾ ಮ  ನರೇಗಾ ನೌಕರರ ಸಂಘದಿಂದ ವೇತನ ಪಾವತಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮ-ನರೇಗಾ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಗೌರವಾಧ್ಯಕ್ಷ ಲೋಕೇಶ್ ಸೇರಿದಂತೆ ಜಿಲ್ಲಾ ಪಂಚಾಯಿತಿ ಎಡಿಪಿಸಿ, ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕ ಅಭಿಯಂತರರು, ಲೆಕ್ಕ ಸಹಾಯಕರು, ಬಿ.ಎಫ್.ಟಿ, ಗ್ರಾಮ ಕಾಯಕ ಮಿತ್ರರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಎಲ್ಲಾ ನರೇಗಾ ನೌಕರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ