ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ವಿಜಯ ದರ್ಪಣ ನ್ಯೂಸ್….
ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶಿಡ್ಲಘಟ್ಟ : ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ 516 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಂಪೇಗೌಡರು ಎಲ್ಲಾ ಮತಧರ್ಮಗಳನ್ನು ಸಮಭಾವದಿಂದ ಕಂಡವರು ನಾಡಪ್ರಭುಗಳು ಅವರು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ. ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿ ನಮಗೆ ಮಾದರಿಯಾಗಿದೆ ಎಂದು ಹೇಳಿದರು.
ಈ ವೇಳೆ ಒಕ್ಕಲಿಗ ಸಮುದಾಯದ 108 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನಡೆಸಿಕೊಡಲಾಯಿತು.
ನಂತರ ಚಿಂತಾಮಣಿ ಮಾರ್ಗದಲ್ಲಿನ ಶ್ರೀಕೆಂಪೇಗೌಡರ ಪುತ್ಥಳಿಗೆ ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಮಾಲಾರ್ಪಣೆ ಮಾಡಿದರು.
ಸಾರಿಗೆ ಬಸ್ ನಿಲ್ದಾಣದ ಶ್ರೀಸಲ್ಲಾಪುರಮ್ಮ ದೇವಿ ದೇವಾಲಯದ ಆವರಣದಲ್ಲಿ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ ನೀಡಿದರು..
ನಗರದ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆ ಸಾಗಿತು. ವಿವಿಧ ಜನಪದ ಕಲಾ ತಂಡಗಳು ಮೆರವಣಿಗೆಗೆ ಕಳೆ ಕಟ್ಟಿದ್ದವು. ಕೆಂಪೇಗೌಡರ ಬದುಕು ಸಾಧನೆ ಕುರಿತು ಹಾಡುಗಳು, ಘೋಷಣೆಗಳು ಮುಗಿಲು ಮುಟ್ಟಿದ್ದವು. ಕೋಟೆ ವೃತ್ತದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಪ್ರಮುಖರನ್ನು ಸನ್ಮಾನಿಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುತ್ತಿನ ಪಲ್ಲಕ್ಕಿಗಳ ವಾಹನಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಆಂಜಿನಪ್ಪ, ಸೀಕಲ್ ಆನಂದಗೌಡ, ಅಪ್ಪೇಗೌಡನಹಳ್ಳಿ ಕೆ.ಲಕ್ಷ್ಮೀನಾರಾಯಣರೆಡ್ಡಿ, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಯುವಸೇನೆ ಅಧ್ಯಕ್ಷ ವೆಂಕಟಸ್ವಾಮಿ,ಹುಜುಗೂರು ರಾಮಣ್ಣ, ಮೇಲೂರು ಬಿ.ಕೆ.ಶ್ರೀನಿವಾಸ್,ಆರ್.ಎ.ಉಮೇಶ್, ತಾದೂರು ರಘು ,
ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್,ತಹಶೀಲ್ಧಾರ್ ಗಗನ ಸಿಂಧು, ಇಒ ಹೇಮಾವತಿ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ನಗರಸಭೆ ಪೌರಾಯುಕ್ತ ಮೋಹನ್ ಕುಮಾರ್ ,ಬಿಇಒ ನರೇಂದ್ರಕುಮಾರ್,ವಕೀಲರ ಸಂಘದ ಅದ್ಯಕ್ಷ ನಾರಾಯಣಸ್ವಾಮಿ ಹಾಗು ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಂಡಿದ್ದರು.