--Ads--

ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ

On: July 1, 2025 5:37 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ

ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದಾರೆ.

ಅವಧಿ ಅಧಿಕಾರ ಹಸ್ತಾಂತರ ಒಪ್ಪಂದದ ಹಿನ್ನೆಲೆ ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಹಾಗೂ ಬೈರಸಂದ್ರ ಗ್ರಾಮದ ಶಶಿಕಲಾ ನಾಮಪತ್ರ ಸಲ್ಲಿಸಿದ್ದರು.

ಒಟ್ಟು 17 ಮಂದಿ ಸದಸ್ಯತ್ವ ಬಲ ಹೊಂದಿರುವ ಗ್ರಾಮ ಪಂಚಾಯತಿಯಲ್ಲಿ ಎಸ್‌.ನಯನಾ ಅವರಿಗೆ 10 ಮತ ಹಾಗು ಶಶಿಕಲಾ ಅವರಿಗೆ 7 ಮತಗಳು ಬಂದಿದ್ದು ಎಸ್.ನಯನಾ ಅವರು ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಕೃಷಿ ಸಹಾಯಕ ನಿರ್ದೇಶಕ ಪಿ.ರವಿ ಘೋಷಣೆ ಮಾಡಿದರು.

ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರು, ಅಧ್ಯಕ್ಷ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಿದ್ದರಿಂದ ಪಕ್ಷದ ಸದಸ್ಯರಲ್ಲೆ ಗೊಂದಲವುಂಟಾಗಿತ್ತು ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ಬೆಳಗ್ಗೆಯಿಂದ ಸಂಧಾನ ನಡೆಸಿದರಾದರೂ ಸಂಧಾನ ವಿಫಲವಾಗಿದ್ದರಿಂದ ಚುನಾವಣೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ರಾಜೀವ್ ಗೌಡ ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಇಂದಿರಾ, ಮಾಜಿ ಅಧ್ಯಕ್ಷ ನಾಗೇಶ್‌, ಮಿತ್ತನಹಳ್ಳಿ ಹರೀಶ್, ಸುಗಟೂರು ದೇವರಾಜ್, ಸತೀಶ್, ಮಿತ್ತನಹಳ್ಳಿ ಮುನಿಆಂಜಿನಪ್ಪ, ಪರಮೇಶಪ್ಪ,ದ್ಯಾವಪ್ಪ, ನಾರಾಯಣಸ್ವಾಮಿ,ದೇವರಾಜ್‌, ನಾಗೇಶ್,ತಿರುಮಳಪ್ಪ ಶಿವಶಂಕ‌ರ್ ಇನ್ನಿತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮ ಭಕ್ತಿಭಾವ ಸಂಭ್ರಮದಿಂದ ಆಚರಣೆ

ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ

ಹಿರಿಯರಿಗೆ ಹಾಗೂ ದಿವ್ಯಾಂಗರಿಗೆ ಆತ್ಮವಿಶ್ವಾಸ ನೀಡುವ ಕೆಲಸದಲ್ಲಿ ಸಾರ್ಥಕತೆಯ ಭಾವ: ಸಂಸದ ಡಾ.ಕೆ.ಸುಧಾಕರ್‌

ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ , ಸನ್ಮಾನ

ಶಿಡ್ಲಘಟ್ಟ ಪಿ.ಎಲ್‌.ಡಿ ಬ್ಯಾಂಕ್ ಸರ್ವ ಸದಸ್ಯರ ಮಹಾಸಭೆ ಸೆಪ್ಟಂಬರ್ -19ಕ್ಕೆ

“ಭಾವುಕ ಲೋಕದಲ್ಲಿ ಮಿಂದೆದ್ದ ಸೇವಾ ಸೌಭಾಗ್ಯ-ಬಾಗಿನೋತ್ಸವ” ಅರ್ಥಪೂರ್ಣ ಬಾಗಿನೋತ್ಸವ ನಡೆಸಿಕೊಟ್ಟ ಶಾಸಕ ಬಿ.ಎನ್.ರವಿಕುಮಾರ್