ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್.ಮೇ 18

ಬೆಂಗಳೂರು ಗ್ರಾಮಾಂತರ ಜಿಲ್ಲೆ ಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ರುವ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಷರತ್ತುಗಳು, ಅರ್ಜಿ ನಮೂನೆ ಮತ್ತು ವಿವರಗಳನ್ನು ಉಪ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು ,ಅರ್ಜಿ ಸಲ್ಲಿಸಲು ದಿನಾಂಕ: 25.05.2023 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉನಿರ್ದೇಶಕರು ತಿಳಿಸಿದ್ದಾರೆ.