ಬೆಂಗಳೂರು. ಮೇ 19
ನಾರಾಯಣ ನೇತ್ರಾಲಯದ ಮುಖ್ಯಸ್ಥರು ಪ್ರಖ್ಯಾತ ನೇತ್ರ ತಜ್ಞರಾದ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳಿಗೆ ಡಾ. ಭುಜಂಗ ಶೆಟ್ಟಿ ಚಿಕಿತ್ಸೆ ನೀಡಿದ್ದರು.
ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ತಕ್ಷಣ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಡಾ.ಭುಜಂಗ ಶೆಟ್ಟಿ ನಿಧನರಾಗಿದ್ದಾರೆ.







