ಶಾಸಕ ಶರತ್ ಬಚ್ಚೇಗೌಡರಿಗೆ ಸಚಿವ ಸ್ಥಾನನೀಡಿ :ಸಿ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ರಾಜ್ಯದ ಪ್ರಭಾವಿ ಒಕ್ಕಲಿಗರ ಯುವ ನಾಯಕರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲಾ ಜನಾಂಗಗಳ ಜನರ ಒಡನಾಡಿ  ಉತ್ತಮ ವಾಗ್ಮೀಗಳು ಆದ ಶರತ್ ಬಚ್ಚೇಗೌಡ ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು ಸಚಿವ ಸ್ಥಾನ ನೀಡಬೇಕೆಂದು ಭಾರತ ಜನ ಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ ಮುನಿಯಪ್ಪ ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು ಹೊಸಕೋಟೆ ತಾಲೂಕಿನಲ್ಲಿ ಜಾತಿ ಭೇದವಿಲ್ಲದೆ ಪಕ್ಷ ಬೇಧ ವಿಲ್ಲದೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರರಾಗಿದ್ದಾರೆ, ಎರಡು ಬಾರಿ ಶಾಸಕರಾಗಿ ಜನಾನುರಾಗಿಯಾಗಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ಶರತ್ ಬಚ್ಚೇಗೌಡರಿಗೆ ಸಚಿವ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ಕೀರ್ತಿ ಬರುತ್ತದೆ. ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಯಾಗಲಿದ್ದಾರೆ ಎಂದರು.