--Ads--

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ: ಸಂಸದ ಡಾ.ಕೆ.ಸುಧಾಕರ್‌

On: January 11, 2026 2:29 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ: ಸಂಸದ ಡಾ.ಕೆ.ಸುಧಾಕರ್‌

ಹಿಂದೆ ರಾಜಕೀಯ ತೀರ್ಮಾನಗಳೇ ಹೆಚ್ಚು, ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು

ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 10,

ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್‌ ಜಿ ಯೋಜನೆ ತಂದಿದೆ. ಇದು 2047 ರ ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಪೂರಕವಾಗಿದೆ. 2005 ರ ಮೂಲ ಕಾಯಿದೆಯನ್ನು ಈಗಿನ ಕಾಲಕ್ಕೆ ತಕ್ಕಂತೆ ಸುಧಾರಣೆ ಮಾಡುವುದು ಅನಿವಾರ್ಯವಾಗಿತ್ತು. ಯುಪಿಎ ಆಡಳಿತದ ಅವಧಿಯಲ್ಲಿ ಈ ಯೋಜನೆಯಡಿ ಭ್ರಷ್ಟಾಚಾರ ಹಾಗೂ ರಾಜಕೀಯ ಹಸ್ತಕ್ಷೇಪ ನಡೆಯುತ್ತಿತ್ತು. ಗ್ರಾಮ ಪಂಚಾಯಿತಿಗಳ ಪಾತ್ರ ಹೆಸರಿಗೆ ಮಾತ್ರವಿದ್ದು, ರಾಜಕೀಯ ತೀರ್ಮಾನಗಳೇ ಹೆಚ್ಚಾಗಿರುತ್ತಿತ್ತು. ಇದನ್ನು ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು. ಹಾಜರಾತಿಯಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿದ್ದು, 10 ಜನ ಕೆಲಸಕ್ಕೆ ಬಂದರೆ 50 ಜನರ ಹೆಸರು ನೋಂದಾಯಿಸಲಾಗುತ್ತಿತ್ತು. ಯೋಜನೆಯ ಹಣದಲ್ಲಿ ಶೇ.40 ರಿಂದ 50 ರಷ್ಟು ಮೊತ್ತ ದುರುಪಯೋಗವಾಗಿದೆ ಎಂದು ಸಿಎಜಿ ವರದಿ ಕೂಡ ಹೇಳಿತ್ತು ಎಂದರು.

ಗುತ್ತಿಗೆದಾರರಿಗೆ ಕೆಲಸ ನೀಡುವುದು ಹಾಗೂ ಕೂಲಿ ಪಾವತಿಯಲ್ಲಿ 2 ರಿಂದ 4 ತಿಂಗಳ ವಿಳಂಬವಾಗುತ್ತಿತ್ತು. ಇದರಿಂದ ಶ್ರಮ ಪಟ್ಟ ಗ್ರಾಮೀಣ ಜನರಿಗೆ ತೀವ್ರ ಅನ್ಯಾಯವಾಗಿತ್ತು. ಬೋಗಸ್‌ ಬಿಲ್‌ಗಳನ್ನು ತಡೆಹಿಡಿರುವುದಕ್ಕೆ, ಮಹಾತ್ಮ ಗಾಂಧೀಜಿ ಹೆಸರಲ್ಲಿ ನೂರಾರು ಕೋಟಿ ಲೂಟಿ ಮಾಡಿರುವುದನ್ನು ತಡೆದಿರುವುದಕ್ಕೆ ಕಾಂಗ್ರೆಸ್‌ ಈಗ ಹೋರಾಟ ಮಾಡುತ್ತಿದೆ. ಗಾಂಧೀಜಿಯವರು ಶ್ರೀರಾಮನನ್ನು ಇಷ್ಟಪಡುತ್ತಿದ್ದರು. ಆದರೆ ಕಾಂಗ್ರೆಸ್‌ಗೆ ಶ್ರೀರಾಮನ ಹೆಸರು ಆಗುತ್ತಿಲ್ಲ. ಆ ಹೆಸರನ್ನೇ ಕಾಂಗ್ರೆಸ್‌ ವಿರೋಧಿಸುತ್ತಿದೆ. ಕಾಂಗ್ರೆಸ್‌ ಹೋರಾಟದ ಮೂಲಕ ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತೇವೆ ಎಂಬ ಸಂದೇಶ ನೀಡುತ್ತಿದೆ ಎಂದರು.

ಹೊಸ ಯೋಜನೆಯಲ್ಲಿ ಪಾರದರ್ಶಕತೆ ತರಲಾಗಿದೆ. ಜಿಯೋ ಟ್ಯಾಗ್‌, ಸ್ಯಾಟಲೈಟ್‌ ಚಿತ್ರ, ಗ್ರಾಮ ಪಂಚಾಯಿತಿಗೆ ಅಧಿಕಾರ, ಗತಿಶಕ್ತಿ ಕಚೇರಿಗೆ ಸಂಪರ್ಕ ಮೊದಲಾದ ಕ್ರಮಗಳ ಮೂಲಕ ಯೋಜನೆಯಲ್ಲಿ ಅಕ್ರಮವನ್ನು ತಡೆಗಟ್ಟಲಾಗಿದೆ. ಗ್ರಾಮೀಣ ಭಾರತದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಯಾವುದೇ ಹಣ ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಹವಾಮಾನ ವೈಪರೀತ್ಯ, ಆಸ್ತಿಯ ಸೃಜನೆ, ಜಲ ಸಂರಕ್ಷಣೆ, ರೈತರ ಕೃಷಿ ಭೂಮಿ ಫಲವತ್ತತೆ ಕಾಪಾಡುವುದು ಮೊದಲಾದ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದರು.

ಹೋಲಿಕೆ ನೋಡಿ

ಹಿಂದಿನ ಯುಪಿಎ ಅವಧಿಯಲ್ಲಿ ಯೋಜನೆಗೆ 2.13 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದರೆ, ಎನ್‌ಡಿಎ ಸರ್ಕಾರ 8.53 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಅಂದರೆ ಅನುದಾನ 4 ಪಟ್ಟು ಅಧಿಕವಾಗಿದೆ. ಹಿಂದೆ 1,660 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದ್ದರೆ, ನಮ್ಮ ಸರ್ಕಾರದ ಅವಧಿಯಲ್ಲಿ 3,210 ಕೋಟಿ ದಿನಗಳನ್ನು ಸೃಜಿಸಲಾಗಿದೆ. ಹಿಂದೆ ವರ್ಷಕ್ಕೆ 153 ಲಕ್ಷ ಕಾಮಗಾರಿ ನಡೆಯುತ್ತಿದ್ದರೆ, ಈಗ 862 ಲಕ್ಷ ಆಗಿದೆ. ಅಂದರೆ 4 ಪಟ್ಟು ಹೆಚ್ಚಾಗಿದೆ. ಹಿಂದೆ ಆಸ್ತಿ ನಿರ್ಮಾಣ 12% ಆಗಿದ್ದರೆ, ಈಗ 62.95% ಆಗಿದೆ. ವರ್ಷದಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಹಾಗೂ ಪರಿಶಿಷ್ಟ ವರ್ಗ ಮತ್ತು ಗುಡ್ಡಗಾಡು ಪ್ರದೇಶಗಳಿಗೆ 150 ದಿನಗಳಿಗೆ ಹೆಚ್ಚಿಸಲಾಗಿದೆ. ಆದ್ದರಿಂದ ಈ ಹೋಲಿಕೆಯನ್ನು ನೋಡಬೇಕು ಎಂದು ಹೇಳಿದರು.

ಈ ಯೋಜನೆಯ ಮೂಲಕ ಮಹಾತ್ಮ ಗಾಂಧೀಜಿಯವರ ಸ್ವರಾಜ್ಯ ಕನಸಿನಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಹೆಸರು ಬದಲಾವಣೆಯ ನೆಪದಲ್ಲಿ ರಾಜಕೀಯ ಮಾಡುತ್ತಿದೆ. ಆದರೆ ದೇಶದ 600 ಕ್ಕೂ ಹೆಚ್ಚು ಸರ್ಕಾರಿ ಸಂಸ್ಥೆಗಳು ಒಂದೇ ಕುಟುಂಬದ ಹೆಸರಿನಲ್ಲಿ ಇರುವುದಕ್ಕೆ ಮೊದಲು ಕಾಂಗ್ರೆಸ್ ಉತ್ತರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

WhatsApp

Join Now

Telegram

Join Now

Instagram

Join Now