--Ads--

ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

On: January 26, 2026 12:43 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಹಾತ್ಮ ಗಾಂಧೀಜಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಸಂಗೊಳ್ಳಿ ರಾಯಣ್ಣನವರ ಸ್ಮರಣೆ

ತಾಂಡವಪುರ ಜನವರಿ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 77 ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶಕ್ಕಾಗಿ ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರನ್ನು ಸ್ಮರಿಸಿಕೊಂಡರು

ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಲೆಕ್ಕ ಸಹಾಯಕ ಎಸ್ ಪುಟ್ಟರಾಜು ಗ್ರಾಮ ಪಂಚಾಯತ್ ಸದಸ್ಯರಾದ ಸಿಎನ್ ಚಂದ್ರು ಎನ್ ಚಂದ್ರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಮಹಾತ್ಮರಿಗೆ ಪೂಜೆ ಸಲ್ಲಿಸಿ ಗೌರವಿಸಿದರು

ಬಳಿಕ ಮಾತನಾಡಿದ ಗ್ರಾಮ ಪಂಚಾಯತ ಸದಸ್ಯರಾದ ಸಿ ಎನ್ ಚಂದ್ರು ಎನ್ ಚಂದ್ರುರವರು ನಮ್ಮ ದೇಶಕ್ಕೆ ಸ್ವಾತಂತ್ರ್ಯದ ನಂತರ ಗಣತಂತ್ರ ಗಣರಾಜ್ಯೋತ್ಸವ 77 ವರ್ಷವಾಗಿದ್ದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ನಾವು ಕೂಡ ಅವರಲ್ಲಿ ಒಬ್ಬರಾಗಿ ದೇಶದ ಉತ್ತಮ ಪ್ರಜೆಗಳಾಗೋಣ ಎಂದು ಮಹಾತ್ಮರನ್ನು ಸ್ಮರಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಲೆಕ್ಕ ಸಹಾಯಕ ಎಸ್ ಪುಟ್ಟರಾಜು, ಗ್ರಾಮ ಪಂಚಾಯಿತಿಯ ಸದಸ್ಯರಾದ ಸಿಎನ್ ಚಂದ್ರು ಎನ್ ಚಂದ್ರು ಮುಖಂಡರಾದ ಮಹದೇವು ಗಾಣಿಗ ಹಾಗೂ ಸಿಬ್ಬಂದಿ ವರ್ಗದವರು ಪೌರ ಕಾರ್ಮಿಕರು. ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ