ವಿಜಯ ದರ್ಪಣ ನ್ಯೂಸ್…..
ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.24:
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

ದಿನಾಂಕ 13.2.2025 ರಂದು ನೆಲಮಂಗಲ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಪ್ರತಿಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದರಿಂದ ಪಕ್ಷವು ಮನ್ನಿಸದ ಕಾರಣ ಅನರ್ಹಗೊಳಿಸಲಾಗಿದೆ.

ಅನರ್ಹರಾದವರು: ಆನಂದ ಜಿ, ಶಾರದಾ ಉಮೇಶ್, ದಾಕ್ಷಾಯಿಣಿ ರವಿಕುಮಾರ್, ಬಿ ಪದ್ಮನಾಭ್, ಭಾರತಿ ಬಾಯಿ, ನರಸಿಂಹಮೂರ್ತಿ, ಲತಾ ಹೇಮಂತ್ ಕುಮಾರ್ ಪ್ರಸ್ತುತ ಉಪಾಧ್ಯಕ್ಷರು, ನೆಲಮಂಗಲ ನಗರಸಭೆ,
&&&&&&&&&&&&&&&&&&&&&&&&&
ಸಚಿವ ಮುನಿಯಪ್ಪ ಅವರನ್ನು ಭೇಟಿಯಾದ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಬಟ್ಟಿ

ತೆಲಂಗಾಣ ರಾಜ್ಯದ ಉಪ ಮುಖ್ಯಮಂತ್ರಿ ಮಲ್ಲು ಬಟ್ಟಿ ವಿಕ್ರಮಾರರ್ಕ ರವರು ಇಂದು ಮಾನ್ಯ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರ ನಿವಾಸಕ್ಕೆ ಬೇಟಿ ನೀಡಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪ.ರಾಜ್ ಸಚಿವ ಪ್ರಿಯಾಂಕ್ ಖರ್ಗೆ , ಶ್ರೀಧರ್ ಬಾಬು, ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ, ಕೈಗಾರಿಕೆ ಮತ್ತು ವಾಣಿಜ್ಯ ಮತ್ತು ಶಾಸಕಾಂಗ ವ್ಯವಹಾರಗಳ ಸಚಿವರು ಉಪಸ್ಥಿತರಿದ್ದರು.









