ವಿಜಯ ದರ್ಪಣ ನ್ಯೂಸ್…….
ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆಯನ್ನು ಎದುರಿಸಿ: ತಹಶೀಲ್ದಾರ್ ಗಗನಸಿಂಧು

ಶಿಡ್ಲಘಟ್ಟ : ಪರೀಕ್ಷೆ ಎಂಬ ಭಯ ಬಿಡಿ ಯಾವುದೆ ಕಾರಣಕ್ಕೂ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆಯನ್ನು ಎದುರಿಸಿ ,ಮನೆಗಳಲ್ಲೂ ಸಹ ಪೋಷಕರು ಮಕ್ಕಳ ಮೇಲೆ ವಿನಾಕಾರಣ ಒತ್ತಡ ಹಾಕಬೇಡಿ ಎಂದು ತಹಶೀಲ್ದಾರ್ ಎನ್.ಗಗನಸಿಂಧು ಅವರು ಎಸ್.ಎಸ್.ಎಲ್.ಸಿ.ಪರೀಕ್ಷಾರ್ಥಿಗಳು ಹಾಗೂ ಪೋಷಕರಲ್ಲಿ ಮನವಿ ಮಾಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.
ಇದೆ ಮಾರ್ಚ್-18 ರಿಂದ ಏಪ್ರಿಲ್-2 ರವರೆಗೂ ಎಸ್.ಎಸ್.ಎಲ್.ಸಿ.ಪರೀಕ್ಷೆಗಳು ನಡೆಯಲಿದ್ದು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ, ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಸಮಚಿತ್ತದಿಂದ ಪರೀಕ್ಷೆಯನ್ನು ಬರೆಯಿರಿ ಎಂದು ಸಲಹೆ ನೀಡಿದರು.
ಜತೆಗೆ ಪೋಷಕರು ಕೂಡ ತಮ್ಮ ಮಕ್ಕಳ ಮೇಲೆ ವಿನಾಕಾರಣ ಹೆಚ್ಚು ಅಂಕಗಳಿಸುವಂತೆ ಒತ್ತಡ ಹಾಕದಿರುವಂತೆ ಮನವಿ ಮಾಡಿ, ಅವರು ಪರೀಕ್ಷೆಗೆ ಶಾಂತ ಚಿತ್ತವಾಗಿ ಸಿದ್ದವಾಗುವ ವಾತಾವರಣವನ್ನು ಮನೆಯಲ್ಲಿ ನಿರ್ಮಿಸಿ ಎಂದು ಕೋರಿದರು,ಈ ಬಾರಿ ಶಿಡ್ಲಘಟ್ಟದಲ್ಲಿ ಶೇ 100 ರಷ್ಟು ಫಲಿತಾಂಶ ಬರುವ ಭರವಸೆಯಿದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು 1363 ಬಾಲಕರು,1323 ಬಾಲಕಿಯರು ಸೇರಿ ಒಟ್ಟು 2686 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
10 ಪರೀಕ್ಷಾ ಕೇಂದ್ರಗಳಲ್ಲಿ 190 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು ಪ್ರತಿ ಪರೀಕ್ಷಾ ಕೊಠಡಿಗೆ ಒಬ್ಬರಂತೆ 190 ಪರೀಕ್ಷಾ ಕೊಠಡಿ ಮೇಲ್ವಿಚಾರಕರು,10 ಮಂದಿ ಮುಖ್ಯ ಅಧೀಕ್ಷಕರು, 4 ಮಂದಿ ಉಪ ಮುಖ್ಯ ಅಧೀಕ್ಷಕರು,10 ಮಂದಿ ಕಸ್ಟೋಡಿಯನ್, ಪರೀಕ್ಷಾ ಕೇಂದ್ರದಲ್ಲೂ ಮೊಬೈಲ್ ಬಳಕೆ ನಿಷೇಧಿಸಿದ್ದು ಮೇಲ್ವಿಚಾರಕರದ್ದೂ ಸೇರಿ ಎಲ್ಲರ ಮೊಬೈಲ್ ಗಳನ್ನು ಸಂಗ್ರಹಿಸುವ 10 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು, 10 ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, 20 ಮಂದಿ ಪೊಲೀಸ್ ಸಿಬ್ಬಂದಿ, 10 ಮಂದಿ ಆರೋಗ್ಯ ಸಿಬ್ಬಂದಿ ಯನ್ನೊಳಗೊಂಡ ಒಟ್ಟು 300 ಮಂದಿ ಪರೀಕ್ಷಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.
ಈ ಕೆಳಗಿನ ಪರೀಕ್ಷಾ ಕೇಂದ್ರಗಳಲ್ಲಿ 1.ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ,ಪುರಬೈರೇನಹಳ್ಳಿ, 2.ಜ್ಞಾನಜ್ಯೋತಿ ಶಾಲೆ ಜಂಗಮಕೋಟೆ ಕ್ರಾಸ್, 3.ಸರ್ಕಾರಿ ಪದವಿ ಪೂರ್ವ ಕಾಲೇಜು ಕನಾಟಕ ಪಬ್ಲಿಕ್ ಶಾಲೆ, ಬಶೆಟ್ಟಿಹಳ್ಳಿ,
4.ಸರ್ಕಾರಿ ಪ್ರೌಡಶಾಲೆ, ಮೆಲೂರು,5.ಕರ್ನಾಟಕ ಪಬ್ಲಿಕ್ ಶಾಲೆ ಬಶೆಟ್ಟಿಹಳ್ಳಿ,6.ವಾಸವಿ ವಿದ್ಯಾಸಂಸ್ಥೆ ಶಿಡ್ಲಘಟ್ಟ,
7.ಮೊರಾರ್ಜಿ ದೇಸಾಯಿ ವಸತಿ ಶಾಲೆ, 11ನೇ ಮೈಲಿ,
8.ಎಸ್. ವಿ.ಎಚ್.ಎಸ್. ಮಳ್ಳೂರು,9.ಬಿಜಿಎಸ್ ಪಬ್ಲಿಕ್ ಶಾಲೆ, ಶಿಡ್ಲಘಟ್ಟ,10. ಸರ್ಕಾರಿ ಪ್ರೌಡಶಾಲೆ, ಜಂಗಮಕೋಟೆ, ನಡೆಯಲಿವೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ನಗರಸಭೆ ಪೌರಾಯುಕ್ತ ಜಿ.ಅಮೃತ ಗೌಡ, ಶಿಕ್ಷಣ ಇಲಾಖೆಯ ಇಸಿಓ ಮಂಜುನಾಥ್ ಹಾಗು ವಿವಿಧ ಇಲಾಖೆ ಸಿಬ್ಬಂದಿ ಹಾಜರಿದ್ದರು.
* ಮೊಳಗಲಿ ಐಕ್ಯಗಾನ *
ಹೊಸ ವರುಷ ಯುಗಾದಿ
ಅನುದಿನವು ಬರಲಿ
ನೋವಿನಲಿ ನೊಂದ ಮನಕೆ
ಸದಾ ಸಂತಸವು ತರಲಿ
ಈ ಮಾವು ಬೇವಿನಂತೆ
ಕನಸುಗಳು ಚಿಗುರಲಿ
ಸಾಧನೆಯ ಹಾದಿಯಲ್ಲಿ
ಎಳೆ ಮನಸುಗಳು ಅರಳಲಿ
ಈ ಹೊಸ ಬೆಳಕಿನಲ್ಲಿ
ಹೊಂಗನಸನು ಚೆಲ್ಲಿ
ಜಗದ ಜನ ಖುಷಿಯಿಂದಲಿ
ಸದಾ ನಕ್ಕು ನಲಿಯಲಿ
ಬೇವಿನಂತೆ ಬೆಲ್ಲದಲಿ
ಬದುಕಿನ ಕಹಿ ಮರೆಯಲಿ
ದ್ವೇಷ ಅಸೂಯೆ ಅಳಿದು
ಪ್ರೀತಿಯ ಧಾರೆ ಎರೆಯಲಿ
ಜಾತಿ ಮತದಿ ಮಲಿನವಾದ
ಶುದ್ಧಗೊಳ್ಳಲಿ ಜನರ ಮನ
ನಾವೆಲ್ಲರೂ ಒಂದೇ ಎಂಬ
ಮೊಳಗಲಿ ಐಕ್ಯಗಾನ
ಸಿದ್ಧರಾಮ ಸಿ ಸರಸಂಬಿ ಕಲಬುರ್ಗಿ✍️










