ವಿಜಯ ದರ್ಪಣ ನ್ಯೂಸ್….
ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿ ಬಂಧನ

ವಿಜಯಪುರ ,ದೇವನಹಳ್ಳಿ ತಾಲ್ಲೂಕು : ಮಹಿಳೆಯ ಕುತ್ತಿಗೆಯಿಂದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಆರೋಪಿಯನ್ನು ವಿಜಯಪುರ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಡಿ.ಜೆ ಹಳ್ಳಿಯ ಆರೀಪ್ ಖಾನ್ (25) ಬಂಧಿತ ಆರೋಪಿ.ಪದ್ಮಾವತಿ ಎಂಬ ಮಹಿಳೆ ಮಾ.17 ರಂದು ಚಿಕ್ಕಬಳ್ಳಾಪುರ-ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಆರೋಪಿ ಹಿಂದಿನಿಂದ ಬೈಕ್ನಲ್ಲಿ ಬಂದು ಕುತ್ತಿಗೆಗೆ ಕೈ ಹಾಕಿ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದನು.
ಸುಮಾರು 5 ಲಕ್ಷ ಮೌಲ್ಯದ 55 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು.

ಆರೋಪಿ ಆರೀಫ್ ಖಾನ್. ಶುಕ್ರವಾರ ಆರೋಪಿಯಿಂದ ಚಿನ್ನದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಿಜಯಪುರ ಟೌನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.










