--Ads--

ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ : ವಾರ್ತಾ ಇಲಾಖೆ ಆಯುಕ್ತ ಭರವಸೆ

On: June 8, 2023 4:06 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ ಜೂನ್ 08.            ಬೆಂಗಳೂರು 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಶುಭ ಕೋರಿದರು.

ಪತ್ರಕರ್ತರ ಮಾಸಾಶನ ಸಮಿತಿ ಸಭೆ ಮತ್ತು ಅಕ್ರೆಡಿಟೇಷನ್ ಕಮಿಟಿ ಸಭೆ ನಡೆದಿಲ್ಲ. ಜತೆಗೆ ಪತ್ರಕರ್ತರ ಹಲವು ಸಮಸ್ಯೆಗಳು ಹಾಗೇ ಉಳಿದಿವೆ ಎಂಬುದನ್ನು ಶಿವಾನಂದ ತಗಡೂರು ಅವರು ಆಯುಕ್ತರ ಗಮನಕ್ಕೆ ತಂದರು. ಆದಷ್ಟು ಬೇಗ ಪತ್ರಕರ್ತರ ಮಾಸಾಶನ ಹಾಗೂ ಮಾಧ್ಯಮ ಮಾನ್ಯತಾ ಸಮಿತಿ ಸಭೆ ನಡೆಸುವುದಾಗಿ ಆಯುಕ್ತರು ಭರವಸೆ ನೀಡಿದರು.

ಪತ್ರಕರ್ತರ ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸದಾಕಾಲ ಪತ್ರಕರ್ತರ ಬೆನ್ನೆಲುಬಾಗಿರುತ್ತೇನೆ. ಸರಕಾರ ಮತ್ತು ಪತ್ರಕರ್ತರ ನಡುವೆ ಸೇತುವೆಯಾಗಿ ವಾರ್ತಾ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದರು.

ಹಿರಿಯ ಪತ್ರಕರ್ತರಾದ ನಾಗಣ್ಣ, ಶಿವಕುಮಾರ್, ಯಾದಗಿರಿ ಜಿಲ್ಲಾ ಪತ್ರಕರ್ತರ ಸಂಘದ ಖಜಾಂಚಿ ಕುಮಾರ ಸ್ವಾಮಿ ಇತರರು ಇದ್ದರು.

WhatsApp

Join Now

Telegram

Join Now

Instagram

Join Now