ವಿಜಯ ದರ್ಪಣ ನ್ಯೂಸ್……
ಕೆಐಎಡಿಬಿಗೆ ಭೂಮಿ ವಶ ಖಂಡಿಸಿ ರೈತರಿಂದ ರಾಷ್ಟ್ರೀಯ ಹೆದ್ದಾರಿ ಬಂದ್*ಮಾಡಿ ಪ್ರತಿಭಟನೆ

ತಾಂಡವಪುರ ಏಪ್ರಿಲ್ 6 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಮುದ್ದಳ್ಳಿ ಗ್ರಾಮದಲ್ಲಿ ಸುಮಾರು 448 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ಕೈಗಾರಿಕರಣಕ್ಕೆ ವಶಪಡಿಸಿಕೊಳ್ಳುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಗ್ರಾಮದ ರೈತರೊಂದಿಗೆಸೋಮವಾರ ಕರ್ನಾಟಕ , ತಮಿಳುನಾಡು , ಕೇರಳ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಲಾಯಿತು.
ಕೆಲವು ಸಮಯದ ನಂತರ ರೈತರು ಹೆದ್ದಾರಿಯಿಂದ ಗ್ರಾಮದವರೆಗು ಕಾಲ್ನಡಿಗೆಯಲ್ಲಿ ತೆರಳಿ ಮುದ್ದಳ್ಳಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಚಾಲನೆ ನೀಡಲಾಯಿತು.
ಸ್ಥಳಕ್ಕೆ ಭೇಟಿ ನೀಡಿದ ನಂಜನಗೂಡಿನ ತಹಸೀಲ್ದಾರ್ ರೈತರ ಹಕ್ಕೊತ್ತಾಯ ಪತ್ರಗಳನ್ನು ಸ್ವೀಕರಿಸಿ ತ್ವರಿತವಾಗಿ ವಿಚಾರವನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.
ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ಹೋರಾಟವು ತಾರ್ಕಿಕ ಹಂತ ತಲುಪುವವರೆಗೂ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಹಸ್ತಕ್ಷೇಪಗಳು ಆಗಬಾರದು ಎಂದು ರೈತರು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ತಲುಪಿಸಿದ್ದಾರೆ.
ಹೋರಾಟದಲ್ಲಿ ಹೊನ್ನೂರು ಪ್ರಕಾಶ್, ಮಂಜು ಕಿರಣ್ , ಶಿರಮಳ್ಳಿ ಮಂಜುನಾಥ, ಮುದ್ದಳ್ಳಿ ಗ್ರಾಮದ ವಿಜಯಲಕ್ಷ್ಮಿ, ಗುರುಸ್ವಾಮಿ ಮಲ್ಲಿಕಾರ್ಜುನ್ ಅವರನ್ನು ಒಳಗೊಂಡಂತೆ ಗ್ರಾಮದ ಹಿರಿಯರು ಮಹಿಳೆಯರು ಹಾಗೂ ಮಕ್ಕಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.











