ವಿಜಯ ದರ್ಪಣ ನ್ಯೂಸ್…..
ಲೋಕೋಪಯೋಗಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ತಾಂಡವಪುರ ಏಪ್ರಿಲ್ 7 ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಆರೋಪದ ಮೇರೆಗೆ ಮೈಸೂರಿನ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಅವರ ಕಚೇರಿಯಲ್ಲಿ ಎಇ ಆಗಿ ಕಾರ್ಯನಿರ್ವಹಿಸುತ್ತಿರು ಎಇ ಜಿ.ಕೆ.ರೇವನ್ ಕುಮಾರ್ ಅವರ ಮಂಡ್ಯದಲ್ಲಿರುವ ಎರಡು ಮನೆ ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 4.27 ಕೋಟಿ ರೂ. ವೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದನೆ ಮಾಡಿರುವುದು ಪತ್ತೆಯಾಗಿದೆ.
ಇವರು ತಮ್ಮ ಆದಾಯಕ್ಕಿಂತ ಶೇ. 327 ರಷ್ಟು ಹೆಚ್ಚು ಆದಾಯ ಹೊಂದಿದ್ದರು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮಂಗಳವಾರ ಬೆಳಗ್ಗೆ ರೇವನ್ ಕುಮಾರ್ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಪೊಲೀಸರು, ಆಸ್ತಿ ಸಂಬಂಧ ಮಹತ್ವದ ದಾಖಲೆಗಳೊಂದಿಗೆ ನಗದು, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ರೇವನ್ ಕುಮಾರ್ ಅವರು ನಾಲ್ಕು ನಿವೇಶನ, 1 ಮನೆ ಹಾಗೂ ಎರಡು ಎಕರೆ ಜಮೀನು ಹೊಂದಿದ್ದು, 2.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮನೆಯಲ್ಲಿ ಸಿಕ್ಕಿದೆ ಎಂದು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಮಾಹಿತಿ ನೀಡಿದರು.










