ವಿಜಯ ದರ್ಪಣ ನ್ಯೂಸ್….
ಮುಂದೊಂದು ದಿನ ನಿಖಿಲ್ ಮುಖ್ಯಮಂತ್ರಿ ಆಗೇ ಆಗ್ತಾರೆ : ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ; G.D ಹರೀಶ್ ಗೌಡ

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.
ಇಂದಿನ ಕಾರ್ಯಕ್ರಮದ ಮೂಲಕ ಜೆಡಿಎಸ್ ತನ್ನ ಶಕ್ತಿಯನ್ನು ತೋರಿಸಿದೆ. 2028ರ ವೇಳೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಆಶಯ ಎಂದು ಹೇಳಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು, ಪಕ್ಷವನ್ನು ಸಂಘಟಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.











