--Ads--

ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ ಸ್ಥಳ ಪರಿಶೀಲನೆ

On: May 12, 2026 4:59 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ ಸ್ಥಳ ಪರಿಶೀಲನೆ

ತಾಂಡವಪುರ ಮೇ 12 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಇಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ನೀಡಿ, ಕೇಂದ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ 1927ರಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರೇರಣೆಯಿಂದ ಸ್ಥಾಪನೆಯಾದ ಖಾದಿ ಕೇಂದ್ರದ ನೆನಪಿಗಾಗಿ ಶತಮಾನೋತ್ಸವ ಭವನ ಹಾಗೂ ಗ್ರಾಮೀಣ ಅಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ, ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ₹40 ಕೋಟಿ ಅನುದಾನ ಮಂಜೂರಾಗಿದೆ.
ಅದರ ಮೊದಲ ಹಂತವಾಗಿ ₹20 ಕೋಟಿ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ, ಖಾದಿ ಗ್ರಾಮೋದ್ಯೋಗ ಕೇಂದ್ರದ ಸುತ್ತಮುತ್ತಲಿನ ಪ್ರದೇಶವನ್ನು ವೀಕ್ಷಿಸಿ, ಖಾದಿ ಮತ್ತು ಗ್ರಾಮೋದ್ಯೋಗ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ರೂಪುರೇಷೆ ಹಾಗೂ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ನಟೇಶ್ ತಹಸೀಲ್ದಾರ್ ಸ್ಮಿತಾ ರಾಮ್ ಸುಧಾಮ್ ಮುಖಂಡರಾದ ಸೋಮು ಸುರೇಶ್ , ಶಿವಣ್ಣ ಶ್ರೀನಿವಾಸ್ ಮೂರ್ತಿ ಪ್ರಜ್ವಲ್ ರಂಗರಾಜ್ ರವರು, ದಿಲೀಪ್ ರವರು ಸೇರಿದಂತೆ ಅಧಿಕಾರಿಗಳು ಹಲವು ಮುಖಂಡರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now